ಉಡುಪಿ: ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿರುವ ಮೇಲ್ವೇತುವೆಗೆ ತುರ್ತಾಗಿ ಮೇಲ್ಛಾವಣಿ ನಿರ್ಮಾಣ ಮಾಡುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಕೆ. ಬಾಲಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.
ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಬಿಸಿಲು ಮತ್ತು ಮಳೆಯಿಂದ ರಕ್ಷಿಸಿಕೊಳ್ಳಲು ಅಸಹಾಯಕ ಪರಿಸ್ಥಿತಿ ಎದುರಾಗಿದೆ. ಆದಷ್ಟು ಶೀಘ್ರವಾಗಿ ಜಿಲ್ಲಾಡಳಿತ, ಶಾಸಕರು, ಸಂಸದರು, ರೈಲ್ವೆ ಅಧಿಕಾರಿಗಳು ಈ ಸಮಸ್ಯೆಯನ್ನು ಗಮನಿಸಿ ಮೇಲ್ಬಾವಣೆ ವ್ಯವಸ್ಥೆ ಕಲ್ಪಿಸಿಕೊಡಬೇಕು. ದಿನ ನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುವ ಈ ರೈಲ್ವೆ ನಿಲ್ದಾಣದಲ್ಲಿ ಮಳೆಗಾಲದಲ್ಲಿ ಸುಸಜ್ಜಿತ ವ್ಯವಸ್ಥೆ ಇಲ್ಲ.
ಒಮ್ಮೊಮ್ಮೆ ರೈಲು ನಿಲ್ದಾಣದಲ್ಲಿ ರೈಲಿನ ನಿಲುಗಡೆ ವೆತ್ಯಾಸ ಕಂಡು ಬಂದಾಗ, ನಿಲ್ದಾಣ ನಿಯಂತ್ರಕರ ಸೂಚನೆ ಮೆರೆಗೆ ಪ್ಲಾಟ್ ಫಾರ್ಮ್ ಬದಲಿಸ ಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ಪ್ರಯಾಣಿಕರು ಎದುರಿಸಬೇಕಾಗುತ್ತದೆ. ಈ ವೇಳೆ ಚಿಕ್ಕ ಮಕ್ಕಳನ್ನು ಹೊತ್ತು ಸಾಗುವ ಮಾತೆಯರ ಮತ್ತು ಕುಂಟುತ್ತ ನಡೆದು ಸಾಗುವ ಹಿರಿಯ ನಾಗರಿಕರ ಪರಿಸ್ಥಿತಿ ಅಯೋಮಯ ಅನಿಸುತ್ತಿದೆ. ಈ ಹಿನ್ನೆಲೆ ಪ್ರಯಾಣಿಕರ ಹಿತದೃಷ್ಟಿಯಿಂದ ಶೀಘ್ರವಾಗಿ ಮಾಡಿನ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…