Featured

ಉಡುಪಿ : ಇಂದ್ರಾಳಿ ರೈಲು ನಿಲ್ದಾಣ 9 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ : ಕೊಂಕಣ ರೈಲು ನಿಗಮ ಮುಖ್ಯಸ್ಥ ಸಂತೋಷ್‌ ಕುಮಾರ್‌ ಝಾ – vishwanews24

ಉಡುಪಿ : ಇಂದ್ರಾಳಿ ರೈಲು ನಿಲ್ದಾಣ 9 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ : ಕೊಂಕಣ ರೈಲು ನಿಗಮ ಮುಖ್ಯಸ್ಥ ಸಂತೋಷ್‌ ಕುಮಾರ್‌ ಝಾ

ಉಡುಪಿ: ಇಂದ್ರಾಳಿ ರೈಲು ನಿಲ್ದಾಣ 9 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ ಹೊಂದಲಿದ್ದು, ಮೊದಲ ಹಂತವಾಗಿ ಫ್ಲ್ಯಾಟ್‌ಫಾರಂ ಮೇಲ್ಛಾವಣಿ ಹಾಗೂ ಸ್ಕೈವಾಕ್‌ ಮೇಲ್ಛಾವಣಿ ನಿರ್ಮಿಸುವುದಾಗಿ ಕೊಂಕಣ ರೈಲು ನಿಗಮದ ಮುಖ್ಯಸ್ಥ ಹಾಗೂ ಎಂಡಿ ಸಂತೋಷ್‌ ಕುಮಾರ್‌ ಝಾ ಹೇಳಿದರು.

ಶಾಸಕ ಯಶ್‌ಪಾಲ್‌ ಸುವರ್ಣ ಅವರು ಸ್ಥಳ ಪರಿಶೀಲಿಸಿಅಗತ್ಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಶುಕ್ರವಾರ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು ಝಾ, ಮೊದಲ ಹಂತದಲ್ಲಿ ಪ್ಲಾಟ್‌ಫಾರಂ ಶೆಲ್ಟರ್‌ ಹಾಗೂ ಸಫೇಸ್‌ ಸಿದ್ಧಪಡಿಸಲಿದ್ದೇವೆ. ಎಲ್ಲ ಪ್ಲಾಟ್‌ಫಾರಂಗೂ ಶೆಲ್ಟರ್‌ ಅಳವಡಿಸಲು ಸುಮಾರು 4.20 ಕೋ.ರೂ. ಅಗತ್ಯವಿದೆ. ಹೀಗಾಗಿ ಇದನ್ನು ಹಂತ ಹಂತವಾಗಿ ಮಾಡಲಿದ್ದೇವೆ. ವಿವಿಧ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಬೇಕಾದ ಮೂಲ ಸೌಕರ್ಯ ಒದಗಿಸುವುದಾಗಿ ತಿಳಿಸಿದರು.

ಉಡುಪಿ ರೈಲು ನಿಲ್ದಾಣದ ಸೌಕರ್ಯಗಳ ಅಭಿವೃದ್ಧಿಗೆ ಸುಮಾರು 9 ಕೋ.ರೂ. ಬೇಕು. ಈ ವರ್ಷ 2 ಕೋಟಿ ರೂ. ಮೀಸಲಿಟ್ಟಿದ್ದು, ಅಗತ್ಯವಿದ್ದಲ್ಲಿ ಇನ್ನಷ್ಟು ನಿಧಿಯನ್ನು ಒದಗಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕೆ ಎಸ್ಕಲೇಟರ್‌ ಅನ್ನು ನಿಲ್ದಾಣದ ಒಳ ಭಾಗಕ್ಕೆ ಸ್ಥಳಾಂತರಿಸಲಾಗುವುದು. ಹಾಗೆಯೇ ಲಿಫ್ಟ್ ವ್ಯವಸ್ಥೆ ಕಲ್ಪಿಸುವು ದಾಗಿ ಹೇಳಿದರು. ಕೊಂಕಣ ರೈಲ್ವೇ ಇತಿಹಾಸದಲ್ಲೇ ಕಳೆದ ಬಾರಿ 301 ಕೋ.ರೂ. ಲಾಭ ಗಳಿಸಿದೆ. ಈ ಬಾರಿ 1,200 ಕೋ.ರೂ. ಯೋಜನೆಗಳನ್ನು ಹಾಕಿಕೊಂಡಿದ್ದು, 200 ಕೋ.ರೂ. ಲಾಭದ ನಿರೀಕ್ಷೆ ಇದೆ. ಶೇ.100ರಷ್ಟು ಹಳಿ ವಿದ್ಯುದ್ದೀಕರಣ ಪೂರ್ಣ ಗೊಂಡಿದ್ದು, ವಾರ್ಷಿಕ 190 ಕೋ.ರೂ. ಉಳಿತಾಯವಾಗುತ್ತಿದೆ. ಹಳಿ ದ್ವಿಪಥ ಇತ್ಯಾದಿ ಪ್ರಸ್ತಾವ ಇದೆ ಎಂದು ಹೇಳಿದರು.

ಉಡುಪಿ ಶಾಸಕ ಯಶ್‌ಪಾಲ್‌ ಎ. ಸುವರ್ಣ ಅವರು ಮಾತನಾಡಿ, ಉಡುಪಿ ರೈಲು ನಿಲ್ದಾಣ ಉನ್ನತೀಕರಣ ಹಾಗೂ ವಂದೇ ಭಾರತ್‌ ವಿಸ್ತರಣೆಗೆ ಕೇಂದ್ರ ಸಚಿವರಲ್ಲಿ ಮನವಿ ಮಾಡಲಾಗಿದೆ. ಕೊಂಕಣ ರೈಲು ವಿಭಾಗ ಆದ್ಯತೆ ಮೇರೆಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಹೇಳಿದರು.

ವಿಶ್ರಾಂತಿ ಕೊಠಡಿ ಉದ್ಘಾಟನೆ

ಇಂದ್ರಾಳಿ ನಿಲ್ದಾಣದಲ್ಲಿ ನೂತನ ವಿಶ್ರಾಂತಿ ಕೊಠಡಿಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಯ ವರು ಉದ್ಘಾಟಿಸಿ, ಭಾರತೀಯ ರೈಲ್ವೆ ಯೊಂದಿಗೆ ಕೊಂಕಣ ರೈಲು ವಿಲೀನಕ್ಕೂ ಪ್ರಯತ್ನಿಸುವುದಾಗಿ ತಿಳಿಸಿದರು. ಈ ವಿಶ್ರಾಂತಿ ಕೊಠಡಿಯಲ್ಲಿ 10 ಆಸನಗಳಿದ್ದು, ಅಗತ್ಯ ವ್ಯವಸ್ಥೆಗಳಿವೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago