Featured

ಉಡುಪಿ : ಇಂದ್ರಾಳಿ ರೈಲು ನಿಲ್ದಾಣ 9 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ : ಕೊಂಕಣ ರೈಲು ನಿಗಮ ಮುಖ್ಯಸ್ಥ ಸಂತೋಷ್‌ ಕುಮಾರ್‌ ಝಾ – vishwanews24

ಉಡುಪಿ : ಇಂದ್ರಾಳಿ ರೈಲು ನಿಲ್ದಾಣ 9 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ : ಕೊಂಕಣ ರೈಲು ನಿಗಮ ಮುಖ್ಯಸ್ಥ ಸಂತೋಷ್‌ ಕುಮಾರ್‌ ಝಾ

ಉಡುಪಿ: ಇಂದ್ರಾಳಿ ರೈಲು ನಿಲ್ದಾಣ 9 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ ಹೊಂದಲಿದ್ದು, ಮೊದಲ ಹಂತವಾಗಿ ಫ್ಲ್ಯಾಟ್‌ಫಾರಂ ಮೇಲ್ಛಾವಣಿ ಹಾಗೂ ಸ್ಕೈವಾಕ್‌ ಮೇಲ್ಛಾವಣಿ ನಿರ್ಮಿಸುವುದಾಗಿ ಕೊಂಕಣ ರೈಲು ನಿಗಮದ ಮುಖ್ಯಸ್ಥ ಹಾಗೂ ಎಂಡಿ ಸಂತೋಷ್‌ ಕುಮಾರ್‌ ಝಾ ಹೇಳಿದರು.

ಶಾಸಕ ಯಶ್‌ಪಾಲ್‌ ಸುವರ್ಣ ಅವರು ಸ್ಥಳ ಪರಿಶೀಲಿಸಿಅಗತ್ಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಶುಕ್ರವಾರ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು ಝಾ, ಮೊದಲ ಹಂತದಲ್ಲಿ ಪ್ಲಾಟ್‌ಫಾರಂ ಶೆಲ್ಟರ್‌ ಹಾಗೂ ಸಫೇಸ್‌ ಸಿದ್ಧಪಡಿಸಲಿದ್ದೇವೆ. ಎಲ್ಲ ಪ್ಲಾಟ್‌ಫಾರಂಗೂ ಶೆಲ್ಟರ್‌ ಅಳವಡಿಸಲು ಸುಮಾರು 4.20 ಕೋ.ರೂ. ಅಗತ್ಯವಿದೆ. ಹೀಗಾಗಿ ಇದನ್ನು ಹಂತ ಹಂತವಾಗಿ ಮಾಡಲಿದ್ದೇವೆ. ವಿವಿಧ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಬೇಕಾದ ಮೂಲ ಸೌಕರ್ಯ ಒದಗಿಸುವುದಾಗಿ ತಿಳಿಸಿದರು.

ಉಡುಪಿ ರೈಲು ನಿಲ್ದಾಣದ ಸೌಕರ್ಯಗಳ ಅಭಿವೃದ್ಧಿಗೆ ಸುಮಾರು 9 ಕೋ.ರೂ. ಬೇಕು. ಈ ವರ್ಷ 2 ಕೋಟಿ ರೂ. ಮೀಸಲಿಟ್ಟಿದ್ದು, ಅಗತ್ಯವಿದ್ದಲ್ಲಿ ಇನ್ನಷ್ಟು ನಿಧಿಯನ್ನು ಒದಗಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕೆ ಎಸ್ಕಲೇಟರ್‌ ಅನ್ನು ನಿಲ್ದಾಣದ ಒಳ ಭಾಗಕ್ಕೆ ಸ್ಥಳಾಂತರಿಸಲಾಗುವುದು. ಹಾಗೆಯೇ ಲಿಫ್ಟ್ ವ್ಯವಸ್ಥೆ ಕಲ್ಪಿಸುವು ದಾಗಿ ಹೇಳಿದರು. ಕೊಂಕಣ ರೈಲ್ವೇ ಇತಿಹಾಸದಲ್ಲೇ ಕಳೆದ ಬಾರಿ 301 ಕೋ.ರೂ. ಲಾಭ ಗಳಿಸಿದೆ. ಈ ಬಾರಿ 1,200 ಕೋ.ರೂ. ಯೋಜನೆಗಳನ್ನು ಹಾಕಿಕೊಂಡಿದ್ದು, 200 ಕೋ.ರೂ. ಲಾಭದ ನಿರೀಕ್ಷೆ ಇದೆ. ಶೇ.100ರಷ್ಟು ಹಳಿ ವಿದ್ಯುದ್ದೀಕರಣ ಪೂರ್ಣ ಗೊಂಡಿದ್ದು, ವಾರ್ಷಿಕ 190 ಕೋ.ರೂ. ಉಳಿತಾಯವಾಗುತ್ತಿದೆ. ಹಳಿ ದ್ವಿಪಥ ಇತ್ಯಾದಿ ಪ್ರಸ್ತಾವ ಇದೆ ಎಂದು ಹೇಳಿದರು.

ಉಡುಪಿ ಶಾಸಕ ಯಶ್‌ಪಾಲ್‌ ಎ. ಸುವರ್ಣ ಅವರು ಮಾತನಾಡಿ, ಉಡುಪಿ ರೈಲು ನಿಲ್ದಾಣ ಉನ್ನತೀಕರಣ ಹಾಗೂ ವಂದೇ ಭಾರತ್‌ ವಿಸ್ತರಣೆಗೆ ಕೇಂದ್ರ ಸಚಿವರಲ್ಲಿ ಮನವಿ ಮಾಡಲಾಗಿದೆ. ಕೊಂಕಣ ರೈಲು ವಿಭಾಗ ಆದ್ಯತೆ ಮೇರೆಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಹೇಳಿದರು.

ವಿಶ್ರಾಂತಿ ಕೊಠಡಿ ಉದ್ಘಾಟನೆ

ಇಂದ್ರಾಳಿ ನಿಲ್ದಾಣದಲ್ಲಿ ನೂತನ ವಿಶ್ರಾಂತಿ ಕೊಠಡಿಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಯ ವರು ಉದ್ಘಾಟಿಸಿ, ಭಾರತೀಯ ರೈಲ್ವೆ ಯೊಂದಿಗೆ ಕೊಂಕಣ ರೈಲು ವಿಲೀನಕ್ಕೂ ಪ್ರಯತ್ನಿಸುವುದಾಗಿ ತಿಳಿಸಿದರು. ಈ ವಿಶ್ರಾಂತಿ ಕೊಠಡಿಯಲ್ಲಿ 10 ಆಸನಗಳಿದ್ದು, ಅಗತ್ಯ ವ್ಯವಸ್ಥೆಗಳಿವೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

7 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

7 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

7 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

8 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

8 hours ago