Featured

ಉಡುಪಿ: ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಕರ್ನಾಟಕದ ಪ್ರಥಮ ಡಿಜಿಟಲ್ ಲಾಕರ್ ಸೌಲಭ್ಯ – vishwanews24

ಉಡುಪಿ: ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಕರ್ನಾಟಕದ ಪ್ರಥಮ ಡಿಜಿಟಲ್ ಲಾಕರ್ ಸೌಲಭ್ಯ

ಉಡುಪಿ: ರಾಜ್ಯದಲ್ಲೇ ಮೊದಲನೇಯದಾಗಿ ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಡಿಜಿಟಲ್ ಲಾಕರ್ ಸೌಲಭ್ಯ ವನ್ನು ಕೊಂಕಣ ರೈಲ್ವೆಯ ಪ್ರಯಾಣಿಕರಿಗೆ ಒದಗಿಸಲಾಗಿದೆ ಎಂದು ಕೊಂಕಣ ರೈಲ್ವೆಯ ಪ್ರಕಟಣೆ ತಿಳಿಸಿದೆ.

ಆಧುನಿಕ ತಂತ್ರಜ್ಞಾನದೊಂದಿಗೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಒಟ್ಟು 15 ಲಾಕರ್‌ಗಳನ್ನು ಒದಗಿಸಲಾಗಿದೆ. ರೈಲ್ವೆ ಪ್ರಯಾಣಿಕರು ಉಡುಪಿಯಲ್ಲಿ ಇಳಿದು ನಿರ್ದಿಷ್ಟ ವೇಳಾವಧಿಗೆ ಗೊತ್ತುಪಡಿಸಿದ ಶುಲ್ಕ ಪಾವತಿಸಿ ತಮ್ಮೆಲ್ಲಾ ಲಗ್ಗೇಜ್‌ ಗಳನ್ನು ಸುರಕ್ಷಿತವಾಗಿ ಡಿಜಿಟಲ್ ಲಾಕರ್ ವ್ಯವಸ್ಥೆಯಲ್ಲಿ ಇರಿಸಿ, ತಮ್ಮ ಕೆಲಸ ಮುಗಿಸಿಕೊಂಡು ಬಂದು ಅದನ್ನು ಕೊಂಡೊಯ್ಯಬಹುದು.

ಲಾಕರ್ ಶುಲ್ಕ: ಕೊಂಕಣ ರೈಲ್ವೆ ನಿರ್ಧರಿಸಿದಂತೆ ಸದ್ಯ ಸಣ್ಣ ಗಾತ್ರದ ಲಗ್ಗೇಜ್‌ಗೆ ಮೂರು ಗಂಟೆ ಅವಧಿಗೆ 15ರೂ., ಆರು ಗಂಟೆಗಳ ಅವಧಿಗೆ 30, 12 ಗಂಟೆಗಳ ಅವಧಿಗೆ 45 ಹಾಗೂ 24 ಗಂಟೆಗಳ ಅವಧಿಗೆ 60 ರೂ.ಆಗಿರುತ್ತದೆ.

ಮಧ್ಯಮ ಗಾತ್ರದ ಲಗ್ಗೇಜ್‌ಗೆ 3ಗಂಟೆಗೆ- 20ರೂ, 6ಗಂಟೆಗೆ-40, 12ಗಂಟೆಗೆ-60 ಹಾಗೂ 24 ಗಂಟೆಗೆ 80ರೂ. ದೊಡ್ಡ ಗಾತ್ರದ ಲಗ್ಗೇಜ್‌ಗೆ 3ಗಂಟೆಗೆ -40, 6ಗಂಟೆಗೆ- 60, 12ಗಂಟೆಗೆ- 90 ಹಾಗೂ 24 ಗಂಟೆಗೆ -120 ರೂ. ಅತಿದೊಡ್ಡ ಗಾತ್ರದ ಲಗ್ಗೇಜ್‌ಗೆ 3ಗಂಟೆಗೆ- 60, 6ಗಂಟೆಗೆ -120, 12ಗಂಟೆಗೆ- 180 ಹಾಗೂ 24 ಗಂಟೆಗೆ-240 ರೂ.ಗಳನ್ನು ನಿಗದಿ ಪಡಿಸಲಾಗಿದೆ.

ಈ ಶುಲ್ಕವು ಶೇ.18 ಜಿಎಸ್‌ಟಿಯನ್ನು ಒಳಗೊಂಡಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

6 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

6 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

6 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

6 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

7 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

7 hours ago