Featured

ಉಡುಪಿ : ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ – vishwanews24

ಉಡುಪಿ : ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ

   ಉಡುಪಿ : ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು

  ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

  ಉಡುಪಿಯಿಂದ ಮಣಿಪಾಲ್ಗೆ ಹೋಗುವ ರಸ್ತೆ ಅಗಲೀಕರಣ ಕಾಮಗಾರಿಯ ಸಂದರ್ಭದಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ರೈಲ್ವೇ ಇಲಾಖೆಯ ಉಕ್ಕಿನ ಸೇತುವೆ ನಿರ್ಮಾಣ ಮಾಡಬೇಕೆಂದು ಸೂಚನೆ ನೀಡಿದ ಹಿನ್ನಲೆಯಲ್ಲಿ, 2018 ನೇ ಸಾಲಿನಲ್ಲಿ ಉಕ್ಕಿನ ಸೇತುವೆ ನಿರ್ಮಾಣ ಕಾಮಗಾರಿ ಪ್ರಕ್ರಿಯೆಯು ಪ್ರಾರಂಭವಾಗಿ, ಕಳೆದ 5 ವರ್ಷ ಕಳೆದರೂ ಪೂರ್ಣಗೊಳ್ಳದೇ ಸಾರ್ವಜನಿಕರ ಸಂಚಾರಕ್ಕೆ ಅವ್ಯವಸ್ಥೆ ಉಂಟಾಗಿ ಸಾರ್ವಜನಿಕರಿಂದ ದೂರುಗಳು ಪ್ರತಿದಿನವೂ ಕೇಳಿಬರುತ್ತಿದೆ. ಆದರೆ, ಗುತ್ತಿಗೆದಾರರುಗಳು ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಇರುವುದು ಇದಕ್ಕೆಲ್ಲಾ ಕಾರಣ. ಪ್ರಮುಖ ಗುತ್ತಿಗೆದಾರ ಹಾಗೂ ಉಪ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ಗೆ ಸೇರಿಸಲು ಸಂಬ0ಧಪಟ್ಟವರಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ಅಭಿಯಂತರರಿಗೆ ತಿಳಿಸಿದರು

   ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯ ಕಳೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗುತ್ತಿಗೆದಾರರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರುಗಳಿಗೆ ರಾತ್ರಿ ಹಾಗೂ ಹಗಲು ಎರಡೂ ಪಾಳಯದಲ್ಲಿ ಕಾರ್ಮಿಕರುಗಳನ್ನು ನಿಯೋಜಿಸಿ, ಕಾಮಗಾರಿಯನ್ನು ಶೀಘ್ರವಾಗಿ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಆದರೆ, ಕೆಲವೇ ಮಂದಿ ಕಾರ್ಮಿಕರನ್ನು ನಿಯೋಜಿಸಿರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆಇವರುಗಳು ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆದ್ಯತೆಯ ಮೇಲೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು

   ಉಕ್ಕಿನ ಸೇತುವೆಯ ನಿರ್ಮಾಣದ ವೆಲ್ಡಿಂಗ್ ಕೆಲಸವನ್ನು ನಿರ್ವಹಿಸಲು ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಬೇಕು. ಇದರ ಜೊತೆಯಲ್ಲಿಯೇ ಉಕ್ಕಿನ ಮೇಲ್ಸೇತುವೆಯ ಗರ್ಡಲ್ಸ್ ಅನ್ನು ಹಳಿಯ ಮೇಲ್ಭಾಗದಲ್ಲಿ ಇರಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರಕ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು

   ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರಸ್ತುತ ಬಾಕಿ ಇರುವ ಕಾಮಗಾರಿಯನ್ನು ಮಾಡಲು ಯೋಜನೆಯನ್ನು ರೂಪಿಸಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ಸಲಕರಣೆಗಳನ್ನು ನಿಯೋಜಿಸುವುದು ಸೇರಿದಂತೆ ಮತ್ತಿತರ ಪತ್ರ ವ್ಯವಹಾರವನ್ನು ಕೂಡಲೇ ಮಾಡಬೇಕು ಎಂದು ಸೂಚನೆ ನೀಡಿದರು

   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮಾತನಾಡಿ, ಕಾಮಗಾರಿಯ ವಿಳಂಬದಿAದಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಕಿರಿಕಿರಿ ಉಂಟಾಗುವುದರ ಜೊತೆಗೆ ಅನೇಕ ರಸ್ತೆ ಅಪಘಾತಗಳು ಸಹ ಸಂಭವಿಸಿವೆ. ಇದೆಲ್ಲದ್ದಕ್ಕೂ ನಿರ್ಲಕ್ಷö್ಯದ ಕಾಮಗಾರಿ ಕೈಗೊಂಡಿರುವುದೇ ಆಗಿದೆ. ಅಪಘಾತದ ಪ್ರಕರಣಗಳಲ್ಲಿಯೂ ಗುತ್ತಿಗೆದಾರರು, ಅಭಿಯಂತರರುಗಳನ್ನು ಸೇರಿಸಿ, ನಿರ್ಲಕ್ಷ್ಯ ಪ್ರಕರಣವನ್ನು ದಾಖಲಿಸಲಾಗುವುದು ಎಂದರು.

  ಸಭೆಯಲ್ಲಿ ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಪಾಲ ಕೃಷ್ಣ, ಶೃಂಗೇರಿಚಿಕ್ಕಮಗಳೂರು ರಾಷ್ಟಿçà ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

18 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

18 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

19 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

19 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago