ಉಡುಪಿ

ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಜ.15ರೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ : ಸಂಸದ ಕೋಟ ಭರವಸೆ – vishwanews24

ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಜ.15ರೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ- ಸಂಸದ ಕೋಟ ಭರವಸೆ

ಉಡುಪಿ: ಉಡುಪಿ ಮಣಿಪಾಲ ಸಂಪರ್ಕಿಸುವ ಇಂದ್ರಾಳಿ ರೈಲ್ವೇ ಸೇತುವೆ 2025ರ ಜನವರಿ 15ರೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.

ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಅವ್ಯವಸ್ಥೆಯಿಂದ ಈಗಾಗಲೇ ಹಲವು ಬಾರಿ ಅಪಘಾತಗಳು ನಡೆದಿದೆ. ಕಾಮಗಾರಿ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ, ರೈಲ್ವೇ ಸೇತುವೆ ಕಾಮಗಾರಿಯ ಪರಿಶೀಲನೆ ನಡೆಸಿದರು.

ಭೇಟಿ ವೇಳೆ ಮಾತನಾಡಿದ ಅವರು, ಈ ಸೇತುವೆ ಬಗ್ಗೆ ತುಂಬಾ ವಿವಾದಗಳು ನಡೆಯುತ್ತಿವೆ ಅಪಘಾತಗಳು ಆಗಿವೆ. 2018 ರಲ್ಲಿ ಈ ಕಾಮಗಾರಿ ಆರಂಭವಾಗಿದ್ದು, ರೈಲ್ವೆ ಇಲಾಖೆ ವಿಳಂಬ ದಿಂದ ತಡವಾಗುತ್ತಿದೆ. 138 ಟನ್ ತೂಕದ ಗರ್ಡರ್ ಅಳವಡಿಸುವ ಯೋಜನೆ ಇದಾಗಿತ್ತು. ರಸ್ತೆ ಉದ್ದ 38 ಮೀಟರ್ ನಿಂದ 58 ಮೀಟರ್ ಗೆ ವಿಸ್ತರಣೆಯಾಗಿದೆ. ಗರ್ಡರ್ ಗಳಿಗೆ ಅಳವಡಿಸುವ ಸ್ಟೀಲ್ 420 ಟನ್ ಗೆ ಏರಿಕೆಯಾಗಿದೆ. ಕಾಮಗಾರಿ ವಿಳಂಬವಾಗಿರುವುದು ಹೌದು. ಜನವರಿ 15ರೊಳಗೆ ವಾಹನ ಸಂಚಾರಕ್ಕೆ ಅನುಕೂಲ ಮಾಡಲಾಗುವುದು ಎಂದು ತಿಳಿಸಿದರು.

ಮುಂದುವರೆದು ಜಿಲ್ಲಾಧಿಕಾರಿಗಳು ಮತ್ತು ಎಸ್ ಪಿ ನಡೆಸಿರುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗಿದೆ. ಕಾಮಗಾರಿಗೆ ಬೇಕಾದ ಎಲ್ಲಾ ಮೆಟೀರಿಯಲ್ಸ್ ಈಗ ಬಂದಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರನ ಮೇಲೆ ಎಫ್‌ಐಆರ್ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಪಘಾತಗಳು ಆಗುತ್ತಿವೆ, ಹಾಗಾಗಿ ಎಫ್‌ಐಆರ್ ಕೂಡ ಆಗಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಜನವರಿ 15ರೊಳಗೆ ಕಾಮಗಾರಿ ಮುಗಿಸುವುದಾಗಿ ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ. ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ನಾನು ಸಂಸದನಾಬಳಿಕ ನಾಲ್ಕೈದು ಬಾರಿ ಸಭೆ ಕರೆದಿದ್ದೇನೆ. ಈ ಸ್ಥಳಕ್ಕೆ ಮೂರು ನಾಲ್ಕು ಬಾರಿ ಭೇಟಿ ಕೊಟ್ಟಿದ್ದೇನೆ ಎಂದರು.

ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ‘ನವೆಂಬರ್ 20 ರೊಳಗೆ ಗರ್ಡರ್‌ಗಳ ವೆಲ್ಡಿಂಗ್ ಪೂರ್ಣಗೊಳಿಸಲಾಗುವುದು. ನಂತರ ಅವುಗಳನ್ನು ಸ್ಥಳಾಂತರಿಸಲಾಗುತ್ತದೆ ಮತ್ತು ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ರೈಲ್ವೆ ಮತ್ತು ಹೆದ್ದಾರಿ ಇಲಾಖೆಗಳೆರಡೂ ತೊಡಗಿಸಿಕೊಂಡಿರುವುದರಿಂದ ವಿವಿಧ ಪ್ರಕ್ರಿಯೆಗಳ ಅಗತ್ಯವಿದೆ. ಯೋಜನೆ ಪೂರ್ಣಗೊಳ್ಳುವವರೆಗೆ ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸಬೇಕೆಂದು ನಾನು ಕೋರುತ್ತೇನೆ ಎಂದು ಹೇಳಿದರು.

ಎನ್‌ಎಚ್‌ಎಐ ಎಂಜಿನಿಯರ್ ಮಂಜುನಾಥ್ ನಾಯಕ್, ಸಿಎಂಸಿ ಸದಸ್ಯ ಗಿರೀಶ್ ಅಂಚನ್ ಮತ್ತು ಇತರ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದರು

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago