ಉಡುಪಿ: ಸಂತೃಸ್ತರಿಗೆ ಪರಿಹಾರ ಮುಟ್ಟಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಆದರೆ ಇದುವರೆಗೂ ಸಂತ್ರಸ್ತರಿಗೆ ಪರಿಹಾರ ತಲುಪಿಲ್ಲ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಹಿಂದೆ ಬಂದ ಪ್ರವಾಹದ ಪರಿಹಾರವನ್ನೇ ಇಲ್ಲಿಯ ತನಕ ಕೊಟ್ಟಿಲ್ಲ. ಆದರೆ ಪ್ರವಾಹ ಬಂದಂತ ಪ್ರದೇಶದ ಶಾಸಕರು ಸಮಾವೇಶದ ಹೆಸರಿನಲ್ಲಿ ಸ್ಟೇಜ್ ಮೇಲೆ ಡ್ಯಾನ್ಸ್ ಮಾಡುತ್ತಿದ್ದಾರೆ. ಇದರಿಂದ ಅವರಿಗೆ ಜನರ ಮೇಲೆ ಎಷ್ಟು ಕಳಕಳಿ ಇದೆ ಎಂದು ಜನರಿಗೆ ತಿಳಿಯುತ್ತದೆ. ಇವತ್ತು ಅಬ್ಬರದ ಭಾಷಣವನ್ನೇ ಬಂಡವಾಳ ಮಾಡಿಕೊಂಡು ಜನರನ್ನು ಮೂರ್ಖನ ರನ್ನಾಗಿಸುವ ನಿರೀಕ್ಷೆಯಲ್ಲಿದ್ದಾರೆ. ತುಂಬಾ ಕೇವಲಾಗಿ ಮಾತನಾಡುವ ಮುಖ್ಯ ಮಂತ್ರಿಯವರನ್ನು ಎಂದೂ ನೋಡಿಲ್ಲ. ಈ ವಿಚಾರದ ಬಗ್ಗೆ ಜನರಿಗೆ ಸಂಪೂರ್ಣ ಮಾಹಿತಿ ಇದೆ, ಜನರು ಮೂರ್ಖರಾಗೊಲ್ಲಾ. ಜನ ಅರ್ಥೈಹಿಸಿಕೊಳ್ಳುತ್ತಾರೆ ಎಂದರು.
ರಾಹುಲ್ ಗಾಂಧಿ ಭಾರತ್ ಜೋಡೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಇಷ್ಟು ಉದ್ದದ ಪಾದಯಾತ್ರೆಯನ್ನು ಮಾಡಲಾಗುತ್ತಿದೆ. ಇವತ್ತು ಆಡಳಿತರೂಢ ಪಕ್ಷ ಧರ್ಮ ಧರ್ಮ ಜಾತಿ ಜಾತಿಗಳ ನಡುವೆ ವಿಭಜನೆ ಮಾಡುವಂತಹ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಎಲ್ಲರನ್ನು ಒಂದು ಕುಟುಂಬ ಎನ್ನುವ ರೀತಿಯಲ್ಲಿ ಒಗ್ಗೂಡಿಸುತ್ತಿದೆ. ನಮ್ಮ ಸಂವಿಧಾನ, ಪ್ರಜಾಪ್ರಭುತ್ವ ಅದನ್ನೇ ಹೇಳುತ್ತಿದೆ. ನಮ್ಮ ದೇಶದಲ್ಲಿ ವಿವಿಧ ಜಾತಿ ಮತ ಭೇದದ ಜನರಿದ್ದು ಅವರನ್ನು ಸಂವಿಧಾನದ ಅಡಿಯಲ್ಲಿ ಒಗ್ಗೂಡಿಸುವ ಕಾರ್ಯ ರಾಹುಲ್ ಗಾಂಧಿ ಮಾಡುತ್ತಿದ್ದಾರೆ ಎಂದಿದ್ದಾರೆ.
BREAKING – ಮಲ್ಪೆ : ಸಾಲದ ಹೊರೆ : ವಿವಾಹಿತ ಮಹಿಳೆ ನೇಣಿಗೆ ಶರಣು – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…