ಉಡುಪಿ: ಸಂತೃಸ್ತರಿಗೆ ಪರಿಹಾರ ಮುಟ್ಟಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಆದರೆ ಇದುವರೆಗೂ ಸಂತ್ರಸ್ತರಿಗೆ ಪರಿಹಾರ ತಲುಪಿಲ್ಲ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಹಿಂದೆ ಬಂದ ಪ್ರವಾಹದ ಪರಿಹಾರವನ್ನೇ ಇಲ್ಲಿಯ ತನಕ ಕೊಟ್ಟಿಲ್ಲ. ಆದರೆ ಪ್ರವಾಹ ಬಂದಂತ ಪ್ರದೇಶದ ಶಾಸಕರು ಸಮಾವೇಶದ ಹೆಸರಿನಲ್ಲಿ ಸ್ಟೇಜ್ ಮೇಲೆ ಡ್ಯಾನ್ಸ್ ಮಾಡುತ್ತಿದ್ದಾರೆ. ಇದರಿಂದ ಅವರಿಗೆ ಜನರ ಮೇಲೆ ಎಷ್ಟು ಕಳಕಳಿ ಇದೆ ಎಂದು ಜನರಿಗೆ ತಿಳಿಯುತ್ತದೆ. ಇವತ್ತು ಅಬ್ಬರದ ಭಾಷಣವನ್ನೇ ಬಂಡವಾಳ ಮಾಡಿಕೊಂಡು ಜನರನ್ನು ಮೂರ್ಖನ ರನ್ನಾಗಿಸುವ ನಿರೀಕ್ಷೆಯಲ್ಲಿದ್ದಾರೆ. ತುಂಬಾ ಕೇವಲಾಗಿ ಮಾತನಾಡುವ ಮುಖ್ಯ ಮಂತ್ರಿಯವರನ್ನು ಎಂದೂ ನೋಡಿಲ್ಲ. ಈ ವಿಚಾರದ ಬಗ್ಗೆ ಜನರಿಗೆ ಸಂಪೂರ್ಣ ಮಾಹಿತಿ ಇದೆ, ಜನರು ಮೂರ್ಖರಾಗೊಲ್ಲಾ. ಜನ ಅರ್ಥೈಹಿಸಿಕೊಳ್ಳುತ್ತಾರೆ ಎಂದರು.
ರಾಹುಲ್ ಗಾಂಧಿ ಭಾರತ್ ಜೋಡೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಇಷ್ಟು ಉದ್ದದ ಪಾದಯಾತ್ರೆಯನ್ನು ಮಾಡಲಾಗುತ್ತಿದೆ. ಇವತ್ತು ಆಡಳಿತರೂಢ ಪಕ್ಷ ಧರ್ಮ ಧರ್ಮ ಜಾತಿ ಜಾತಿಗಳ ನಡುವೆ ವಿಭಜನೆ ಮಾಡುವಂತಹ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಎಲ್ಲರನ್ನು ಒಂದು ಕುಟುಂಬ ಎನ್ನುವ ರೀತಿಯಲ್ಲಿ ಒಗ್ಗೂಡಿಸುತ್ತಿದೆ. ನಮ್ಮ ಸಂವಿಧಾನ, ಪ್ರಜಾಪ್ರಭುತ್ವ ಅದನ್ನೇ ಹೇಳುತ್ತಿದೆ. ನಮ್ಮ ದೇಶದಲ್ಲಿ ವಿವಿಧ ಜಾತಿ ಮತ ಭೇದದ ಜನರಿದ್ದು ಅವರನ್ನು ಸಂವಿಧಾನದ ಅಡಿಯಲ್ಲಿ ಒಗ್ಗೂಡಿಸುವ ಕಾರ್ಯ ರಾಹುಲ್ ಗಾಂಧಿ ಮಾಡುತ್ತಿದ್ದಾರೆ ಎಂದಿದ್ದಾರೆ.
BREAKING – ಮಲ್ಪೆ : ಸಾಲದ ಹೊರೆ : ವಿವಾಹಿತ ಮಹಿಳೆ ನೇಣಿಗೆ ಶರಣು – Vishwanews24
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…