Featured

ಉಡುಪಿ : ಇದು ಮೋದಿ ಕಿ ಗ್ಯಾರಂಟಿ ಅಲ್ಲ, ಜನರಿಗೆ ಮತ್ತೊಮ್ಮೆ ಮಂಕು ಬೂದಿ- ಕೆ.ಕೃಷ್ಣಮೂರ್ತಿ ಆಚಾರ್ಯ – vishwanews24

ಉಡುಪಿ : ಇದು ಮೋದಿ ಕಿ ಗ್ಯಾರಂಟಿ ಅಲ್ಲ, ಜನರಿಗೆ ಮತ್ತೊಮ್ಮೆ ಮಂಕು ಬೂದಿ- ಕೆ.ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ನೀಡಿದ ಜನಕಲ್ಯಾಣ ಯೋಜನೆಗಳನ್ನು ಉಚಿತ ಯೋಜನೆಗಳು, ಬಿಟ್ಟಿ ಭಾಗ್ಯಗಳು ಎಂದು ಹಿಯಾಳಿಸುತ್ತಾ ಭಾರತ ಪಾಕಿಸ್ತಾನ, ಶ್ರೀಲಂಕಾ ರೀತಿ ಆಗುತ್ತದೆ ಎನ್ನುತ್ತಿದ್ದ ಬಿಜೆಪಿ ಈಗ ಅದೇ ಗ್ಯಾರಂಟಿ ಮಾದರಿಯಲ್ಲಿ ಘೋಷಣೆಗಳನ್ನು ಮಾಡುತ್ತಿದೆ.

ಉಚಿತ ಯೋಜನೆಗಳಿಂದ ಆರ್ಥಿಕತೆ ಹಾಳಾಗುತ್ತದೆ ಎಂದಿದ್ದ ಇದೇ ನರೇಂದ್ರ ಮೋದಿ ಈಗ “ಮೋದಿ ಕಿ ಗ್ಯಾರಂಟಿ” ಘೋಷಿಸಿದ್ದಾರೆ. ಇದು ನರೆಂದ್ರ ಮೋದಿ ಕಿ ಗ್ಯಾರಂಟಿ ಅಲ್ಲ ಇದು ಜನರಿಗೆ ಮತ್ತೋಮ್ಮೆ ಮಂಕು ಬೂದಿ

“ಹಿಪಾಕ್ರಸಿ” ಎಂಬುದಕ್ಕೆ ಪರ್ಯಾಯ ಪದವನ್ನು ಹುಡುಕುವುದಾದ್ರೆ ಅದಕ್ಕೆ ” ನರೇಂದ್ರ ಮೋದಿ” ಹೆಸರೇ ಸೂಕ್ತ ಅಲ್ಲವೇ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಈ ಹಿಂದೆಯೂ ಐದು ವರ್ಷದಲ್ಲಿ ಅನೇಕ ಯೋಜನೆಗಳನ್ನು ನುಡಿದಂತೆ ನಡೆದು ಅನುಷ್ಠಾನ ಮಾಡಿದ್ದಾರೆ. ಅದು ಜನರಿಗೆ ತಲುಪಿದೆ. ಇದು ಎಲ್ಲಾ ರಾಜ್ಯಗಳಿಗೂ ಮಾದರಿಯಾಗಿದೆ. ಅದೇ ರೀತಿ ಈ ಬಾರಿಯೂ ಮುಖ್ಯಮಂತ್ರಿ ಆಗಿ ನಮ್ಮ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಹೇಳಿದ ಕಾಂಗ್ರೆಸ್ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ನೀಡುತ್ತಿದೆ. ಆದರೆ ನರೇಂದ್ರ ಮೋದಿಯವರು ಕಳೆದ 9.5 ವರ್ಷದಿಂದ ಹೇಳಿದ ಯಾವುದೇ ಒಂದು ಯೋಜನೆಗಳು ಜನರಿಗೆ ತಲುಪಿಲ್ಲ. ಚುನಾವಣಾ ಪೂರ್ವದಲ್ಲಿ ಅನೇಕ ಭರವಸೆಗಳನ್ನು ಬಿಜೆಪಿ ಸಭೆಯಲ್ಲಿ,ರಾಜಕೀಯ ಭಾಷಣದಲ್ಲಿ ಬಣ್ಣ ಬಣ್ಣದ ಭಾಷಣಗಳನ್ನು ಮಾಡಿದ ನರೇಂದ್ರ ಮೋದಿ ಅವರು ಗೆದ್ದ ನಂತರ ಭಾಷಣದಲ್ಲಿ ಹೇಳಿದ ಯಾವುದನ್ನು ಜನರಿಗೆ ನೀಡಿಲ್ಲ. ಇವತ್ತು ಕಾಂಗ್ರೆಸ್‌ನ ಉಚಿತ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಜನರಿಗೆ ಮೋಸ ಮಾಡಿ ಮತವನ್ನು ಪಡೆಯಲು ಪ್ರಯತ್ನಿಸುತ್ತಿದೆ ಎಂದರು.

ಆದರೆ ಜನರಿಗೆ ಗೊತ್ತು ಕಳೆದ 9.5 ವರ್ಷದಲ್ಲಿ ಮತದಾರನಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಜನರು ಇವರನ್ನು ತಿರಸ್ಕರಿಸುತ್ತಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago