Featured

ಉಡುಪಿ : ಇದು ಮೋದಿ ಕಿ ಗ್ಯಾರಂಟಿ ಅಲ್ಲ, ಜನರಿಗೆ ಮತ್ತೊಮ್ಮೆ ಮಂಕು ಬೂದಿ- ಕೆ.ಕೃಷ್ಣಮೂರ್ತಿ ಆಚಾರ್ಯ – vishwanews24

ಉಡುಪಿ : ಇದು ಮೋದಿ ಕಿ ಗ್ಯಾರಂಟಿ ಅಲ್ಲ, ಜನರಿಗೆ ಮತ್ತೊಮ್ಮೆ ಮಂಕು ಬೂದಿ- ಕೆ.ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ನೀಡಿದ ಜನಕಲ್ಯಾಣ ಯೋಜನೆಗಳನ್ನು ಉಚಿತ ಯೋಜನೆಗಳು, ಬಿಟ್ಟಿ ಭಾಗ್ಯಗಳು ಎಂದು ಹಿಯಾಳಿಸುತ್ತಾ ಭಾರತ ಪಾಕಿಸ್ತಾನ, ಶ್ರೀಲಂಕಾ ರೀತಿ ಆಗುತ್ತದೆ ಎನ್ನುತ್ತಿದ್ದ ಬಿಜೆಪಿ ಈಗ ಅದೇ ಗ್ಯಾರಂಟಿ ಮಾದರಿಯಲ್ಲಿ ಘೋಷಣೆಗಳನ್ನು ಮಾಡುತ್ತಿದೆ.

ಉಚಿತ ಯೋಜನೆಗಳಿಂದ ಆರ್ಥಿಕತೆ ಹಾಳಾಗುತ್ತದೆ ಎಂದಿದ್ದ ಇದೇ ನರೇಂದ್ರ ಮೋದಿ ಈಗ “ಮೋದಿ ಕಿ ಗ್ಯಾರಂಟಿ” ಘೋಷಿಸಿದ್ದಾರೆ. ಇದು ನರೆಂದ್ರ ಮೋದಿ ಕಿ ಗ್ಯಾರಂಟಿ ಅಲ್ಲ ಇದು ಜನರಿಗೆ ಮತ್ತೋಮ್ಮೆ ಮಂಕು ಬೂದಿ

“ಹಿಪಾಕ್ರಸಿ” ಎಂಬುದಕ್ಕೆ ಪರ್ಯಾಯ ಪದವನ್ನು ಹುಡುಕುವುದಾದ್ರೆ ಅದಕ್ಕೆ ” ನರೇಂದ್ರ ಮೋದಿ” ಹೆಸರೇ ಸೂಕ್ತ ಅಲ್ಲವೇ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಈ ಹಿಂದೆಯೂ ಐದು ವರ್ಷದಲ್ಲಿ ಅನೇಕ ಯೋಜನೆಗಳನ್ನು ನುಡಿದಂತೆ ನಡೆದು ಅನುಷ್ಠಾನ ಮಾಡಿದ್ದಾರೆ. ಅದು ಜನರಿಗೆ ತಲುಪಿದೆ. ಇದು ಎಲ್ಲಾ ರಾಜ್ಯಗಳಿಗೂ ಮಾದರಿಯಾಗಿದೆ. ಅದೇ ರೀತಿ ಈ ಬಾರಿಯೂ ಮುಖ್ಯಮಂತ್ರಿ ಆಗಿ ನಮ್ಮ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಹೇಳಿದ ಕಾಂಗ್ರೆಸ್ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ನೀಡುತ್ತಿದೆ. ಆದರೆ ನರೇಂದ್ರ ಮೋದಿಯವರು ಕಳೆದ 9.5 ವರ್ಷದಿಂದ ಹೇಳಿದ ಯಾವುದೇ ಒಂದು ಯೋಜನೆಗಳು ಜನರಿಗೆ ತಲುಪಿಲ್ಲ. ಚುನಾವಣಾ ಪೂರ್ವದಲ್ಲಿ ಅನೇಕ ಭರವಸೆಗಳನ್ನು ಬಿಜೆಪಿ ಸಭೆಯಲ್ಲಿ,ರಾಜಕೀಯ ಭಾಷಣದಲ್ಲಿ ಬಣ್ಣ ಬಣ್ಣದ ಭಾಷಣಗಳನ್ನು ಮಾಡಿದ ನರೇಂದ್ರ ಮೋದಿ ಅವರು ಗೆದ್ದ ನಂತರ ಭಾಷಣದಲ್ಲಿ ಹೇಳಿದ ಯಾವುದನ್ನು ಜನರಿಗೆ ನೀಡಿಲ್ಲ. ಇವತ್ತು ಕಾಂಗ್ರೆಸ್‌ನ ಉಚಿತ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಜನರಿಗೆ ಮೋಸ ಮಾಡಿ ಮತವನ್ನು ಪಡೆಯಲು ಪ್ರಯತ್ನಿಸುತ್ತಿದೆ ಎಂದರು.

ಆದರೆ ಜನರಿಗೆ ಗೊತ್ತು ಕಳೆದ 9.5 ವರ್ಷದಲ್ಲಿ ಮತದಾರನಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಜನರು ಇವರನ್ನು ತಿರಸ್ಕರಿಸುತ್ತಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

8 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

8 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

8 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

9 hours ago