Featured

ಉಡುಪಿ : ಇದು ಮೋದಿ ಕಿ ಗ್ಯಾರಂಟಿ ಅಲ್ಲ, ಜನರಿಗೆ ಮತ್ತೊಮ್ಮೆ ಮಂಕು ಬೂದಿ- ಕೆ.ಕೃಷ್ಣಮೂರ್ತಿ ಆಚಾರ್ಯ – vishwanews24

ಉಡುಪಿ : ಇದು ಮೋದಿ ಕಿ ಗ್ಯಾರಂಟಿ ಅಲ್ಲ, ಜನರಿಗೆ ಮತ್ತೊಮ್ಮೆ ಮಂಕು ಬೂದಿ- ಕೆ.ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ನೀಡಿದ ಜನಕಲ್ಯಾಣ ಯೋಜನೆಗಳನ್ನು ಉಚಿತ ಯೋಜನೆಗಳು, ಬಿಟ್ಟಿ ಭಾಗ್ಯಗಳು ಎಂದು ಹಿಯಾಳಿಸುತ್ತಾ ಭಾರತ ಪಾಕಿಸ್ತಾನ, ಶ್ರೀಲಂಕಾ ರೀತಿ ಆಗುತ್ತದೆ ಎನ್ನುತ್ತಿದ್ದ ಬಿಜೆಪಿ ಈಗ ಅದೇ ಗ್ಯಾರಂಟಿ ಮಾದರಿಯಲ್ಲಿ ಘೋಷಣೆಗಳನ್ನು ಮಾಡುತ್ತಿದೆ.

ಉಚಿತ ಯೋಜನೆಗಳಿಂದ ಆರ್ಥಿಕತೆ ಹಾಳಾಗುತ್ತದೆ ಎಂದಿದ್ದ ಇದೇ ನರೇಂದ್ರ ಮೋದಿ ಈಗ “ಮೋದಿ ಕಿ ಗ್ಯಾರಂಟಿ” ಘೋಷಿಸಿದ್ದಾರೆ. ಇದು ನರೆಂದ್ರ ಮೋದಿ ಕಿ ಗ್ಯಾರಂಟಿ ಅಲ್ಲ ಇದು ಜನರಿಗೆ ಮತ್ತೋಮ್ಮೆ ಮಂಕು ಬೂದಿ

“ಹಿಪಾಕ್ರಸಿ” ಎಂಬುದಕ್ಕೆ ಪರ್ಯಾಯ ಪದವನ್ನು ಹುಡುಕುವುದಾದ್ರೆ ಅದಕ್ಕೆ ” ನರೇಂದ್ರ ಮೋದಿ” ಹೆಸರೇ ಸೂಕ್ತ ಅಲ್ಲವೇ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಈ ಹಿಂದೆಯೂ ಐದು ವರ್ಷದಲ್ಲಿ ಅನೇಕ ಯೋಜನೆಗಳನ್ನು ನುಡಿದಂತೆ ನಡೆದು ಅನುಷ್ಠಾನ ಮಾಡಿದ್ದಾರೆ. ಅದು ಜನರಿಗೆ ತಲುಪಿದೆ. ಇದು ಎಲ್ಲಾ ರಾಜ್ಯಗಳಿಗೂ ಮಾದರಿಯಾಗಿದೆ. ಅದೇ ರೀತಿ ಈ ಬಾರಿಯೂ ಮುಖ್ಯಮಂತ್ರಿ ಆಗಿ ನಮ್ಮ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಹೇಳಿದ ಕಾಂಗ್ರೆಸ್ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ನೀಡುತ್ತಿದೆ. ಆದರೆ ನರೇಂದ್ರ ಮೋದಿಯವರು ಕಳೆದ 9.5 ವರ್ಷದಿಂದ ಹೇಳಿದ ಯಾವುದೇ ಒಂದು ಯೋಜನೆಗಳು ಜನರಿಗೆ ತಲುಪಿಲ್ಲ. ಚುನಾವಣಾ ಪೂರ್ವದಲ್ಲಿ ಅನೇಕ ಭರವಸೆಗಳನ್ನು ಬಿಜೆಪಿ ಸಭೆಯಲ್ಲಿ,ರಾಜಕೀಯ ಭಾಷಣದಲ್ಲಿ ಬಣ್ಣ ಬಣ್ಣದ ಭಾಷಣಗಳನ್ನು ಮಾಡಿದ ನರೇಂದ್ರ ಮೋದಿ ಅವರು ಗೆದ್ದ ನಂತರ ಭಾಷಣದಲ್ಲಿ ಹೇಳಿದ ಯಾವುದನ್ನು ಜನರಿಗೆ ನೀಡಿಲ್ಲ. ಇವತ್ತು ಕಾಂಗ್ರೆಸ್‌ನ ಉಚಿತ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಜನರಿಗೆ ಮೋಸ ಮಾಡಿ ಮತವನ್ನು ಪಡೆಯಲು ಪ್ರಯತ್ನಿಸುತ್ತಿದೆ ಎಂದರು.

ಆದರೆ ಜನರಿಗೆ ಗೊತ್ತು ಕಳೆದ 9.5 ವರ್ಷದಲ್ಲಿ ಮತದಾರನಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಜನರು ಇವರನ್ನು ತಿರಸ್ಕರಿಸುತ್ತಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago