ಉಡುಪಿ: ಸರ್ಕಾರ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ರಚಿಸಿ ಕರಾವಳಿ ಭಾಗದ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಹಿಂದುತ್ವ ಅಜೆಂಡ ಬಳಸಿ ಅಧಿಕಾರಕ್ಕೆ ಬಂದ ಬಿಜೆಪಿ ತನ್ನ ಹಿಡನ್ ಅಜೆಂಡಾವಾದ ಹಿಂದುಳಿದ ವರ್ಗವನ್ನು ಧಮನಿಸುವ ಕಾರ್ಯತಂತ್ರವನ್ನು ನಿಧಾನಕ್ಕೆ ಅನುಷ್ಠಾನ ಗೊಳಿಸುತ್ತಿದೆ.
ಈ ನಿಟ್ಟಿನಲ್ಲಿ ಅವರು ಮಾಡಿದ ಮೊದಲ ಕೆಲಸ ಹಿಂದುಗಳ ಆರಾಧ್ಯ ದೈವ, ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಕುರಿತ ಪಠ್ಯವನ್ನು ಶಾಲೆಯ ಪುಸ್ತಕ ದಿಂದ ತೆಗೆದಿದ್ದು. ಇದು ಕರಾವಳಿ ಭಾಗದ ಹಿಂದುಳಿದ ವರ್ಗಗಳಿಗೆ ಮಾಡಿದ ಘೋರ ಅಪಮಾನ, ಅಂತೆಯೇ ಕರಾವಳಿಯ ಇನ್ನೊಬ್ಬ ಮೇಧಾವಿ, ಹೆಸರಾಂತ ಕವಿ ಕಯ್ಯಾರ ಕಿಂಞಣ್ಣ ರೈ ಅವರ ಕುರಿತ ಪಠ್ಯ ವನ್ನು ತೆಗೆದು ಹಾಕಿದ್ದು ಈ ಬಗ್ಗೆ ಬಂಟರ ಸಂಘದ ಒಕ್ಕೂಟ ಪ್ರಬಲವಾಗಿ ಖಂಡಿಸಿದೆ.
ಈ ರೀತಿಯಾಗಿ ಬಸವಣ್ಣ, ಕುವೆಂಪು, ಕನಕದಾಸರು ಆದಿಯಾಗಿ ಎಲ್ಲರ ಪಠ್ಯವನ್ನು ತೆಗೆದು, ವಿರೂಪಗೊಳಿಸಿ ರಾಜ್ಯದ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಲ್ಲದೆ ವಿಶೇಷವಾಗಿ ಕರಾವಳಿ ಭಾಗದಿಂದ ಗೆದ್ದು ಅಧಿಕಾರ ಪಡೆದು ಕರಾವಳಿ ಭಾಗದ ಪುಣ್ಯ ಪುರುಷರಿಗೆ ಪಠ್ಯ ಪುಸ್ತಕಗಳಲ್ಲಿ ಅವಮಾನ ಮಾಡಿರುವುದು ಖಂಡನೀಯ . ಇನ್ನಾದರೂ ಕರಾವಳಿ ಜನ ಬಿಜೆಪಿಯನ್ನು ದೂರ ಇಡಬೇಕಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…