Featured

ಉಡುಪಿ : ಇನ್ನಾದರೂ ಕರಾವಳಿ ಜನ ಬಿಜೆಪಿಯನ್ನು ದೂರ ಇಡಬೇಕಿದೆ : ರಮೇಶ್ ಕಾಂಚನ್ – Vishwanews24

ಕರಾವಳಿ ಭಾಗದ ಪುಣ್ಯ ಪುರುಷರಿಗೆ ಪಠ್ಯ ಪುಸ್ತಕಗಳಲ್ಲಿ ಅವಮಾನ ಮಾಡಿರುವುದು ಖಂಡನೀಯ..

ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳಿಗೆ ಅವಮಾನ, ಕರಾವಳಿ ಹಿಂದುಳಿದ ವರ್ಗಗಳಿಗೆ ಮಾಡಿದ ಘೋರ ಅಪಮಾನ

ಹಿಂದುತ್ವ ಅಜೆಂಡ ಬಳಸಿ ಅಧಿಕಾರಕ್ಕೆ ಬಂದ ಬಿಜೆಪಿಯಿಂದ ಹಿಡನ್ ಅಜೆಂಡ ನಿಧಾನಕ್ಕೆ ಅನುಷ್ಠಾನ..

ಉಡುಪಿ: ಸರ್ಕಾರ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ರಚಿಸಿ ಕರಾವಳಿ ಭಾಗದ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಹಿಂದುತ್ವ ಅಜೆಂಡ ಬಳಸಿ ಅಧಿಕಾರಕ್ಕೆ ಬಂದ ಬಿಜೆಪಿ ತನ್ನ ಹಿಡನ್ ಅಜೆಂಡಾವಾದ ಹಿಂದುಳಿದ ವರ್ಗವನ್ನು ಧಮನಿಸುವ ಕಾರ್ಯತಂತ್ರವನ್ನು ನಿಧಾನಕ್ಕೆ ಅನುಷ್ಠಾನ ಗೊಳಿಸುತ್ತಿದೆ.

ಈ ನಿಟ್ಟಿನಲ್ಲಿ ಅವರು ಮಾಡಿದ ಮೊದಲ ಕೆಲಸ ಹಿಂದುಗಳ ಆರಾಧ್ಯ ದೈವ, ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಕುರಿತ ಪಠ್ಯವನ್ನು ಶಾಲೆಯ ಪುಸ್ತಕ ದಿಂದ ತೆಗೆದಿದ್ದು. ಇದು ಕರಾವಳಿ ಭಾಗದ ಹಿಂದುಳಿದ ವರ್ಗಗಳಿಗೆ ಮಾಡಿದ ಘೋರ ಅಪಮಾನ, ಅಂತೆಯೇ ಕರಾವಳಿಯ ಇನ್ನೊಬ್ಬ ಮೇಧಾವಿ, ಹೆಸರಾಂತ ಕವಿ ಕಯ್ಯಾರ ಕಿಂಞಣ್ಣ ರೈ ಅವರ ಕುರಿತ ಪಠ್ಯ ವನ್ನು ತೆಗೆದು ಹಾಕಿದ್ದು ಈ ಬಗ್ಗೆ ಬಂಟರ ಸಂಘದ ಒಕ್ಕೂಟ ಪ್ರಬಲವಾಗಿ ಖಂಡಿಸಿದೆ.

ಈ ರೀತಿಯಾಗಿ ಬಸವಣ್ಣ, ಕುವೆಂಪು, ಕನಕದಾಸರು ಆದಿಯಾಗಿ ಎಲ್ಲರ ಪಠ್ಯವನ್ನು ತೆಗೆದು, ವಿರೂಪಗೊಳಿಸಿ ರಾಜ್ಯದ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಲ್ಲದೆ ವಿಶೇಷವಾಗಿ ಕರಾವಳಿ ಭಾಗದಿಂದ ಗೆದ್ದು ಅಧಿಕಾರ ಪಡೆದು ಕರಾವಳಿ ಭಾಗದ ಪುಣ್ಯ ಪುರುಷರಿಗೆ ಪಠ್ಯ ಪುಸ್ತಕಗಳಲ್ಲಿ ಅವಮಾನ ಮಾಡಿರುವುದು ಖಂಡನೀಯ . ಇನ್ನಾದರೂ ಕರಾವಳಿ ಜನ ಬಿಜೆಪಿಯನ್ನು ದೂರ ಇಡಬೇಕಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

15 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

16 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

16 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

16 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

16 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

18 hours ago