Featured

ಉಡುಪಿ : ಇನ್ನಾದರೂ ಕರಾವಳಿ ಜನ ಬಿಜೆಪಿಯನ್ನು ದೂರ ಇಡಬೇಕಿದೆ : ರಮೇಶ್ ಕಾಂಚನ್ – Vishwanews24

ಕರಾವಳಿ ಭಾಗದ ಪುಣ್ಯ ಪುರುಷರಿಗೆ ಪಠ್ಯ ಪುಸ್ತಕಗಳಲ್ಲಿ ಅವಮಾನ ಮಾಡಿರುವುದು ಖಂಡನೀಯ..

ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳಿಗೆ ಅವಮಾನ, ಕರಾವಳಿ ಹಿಂದುಳಿದ ವರ್ಗಗಳಿಗೆ ಮಾಡಿದ ಘೋರ ಅಪಮಾನ

ಹಿಂದುತ್ವ ಅಜೆಂಡ ಬಳಸಿ ಅಧಿಕಾರಕ್ಕೆ ಬಂದ ಬಿಜೆಪಿಯಿಂದ ಹಿಡನ್ ಅಜೆಂಡ ನಿಧಾನಕ್ಕೆ ಅನುಷ್ಠಾನ..

ಉಡುಪಿ: ಸರ್ಕಾರ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ರಚಿಸಿ ಕರಾವಳಿ ಭಾಗದ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಹಿಂದುತ್ವ ಅಜೆಂಡ ಬಳಸಿ ಅಧಿಕಾರಕ್ಕೆ ಬಂದ ಬಿಜೆಪಿ ತನ್ನ ಹಿಡನ್ ಅಜೆಂಡಾವಾದ ಹಿಂದುಳಿದ ವರ್ಗವನ್ನು ಧಮನಿಸುವ ಕಾರ್ಯತಂತ್ರವನ್ನು ನಿಧಾನಕ್ಕೆ ಅನುಷ್ಠಾನ ಗೊಳಿಸುತ್ತಿದೆ.

ಈ ನಿಟ್ಟಿನಲ್ಲಿ ಅವರು ಮಾಡಿದ ಮೊದಲ ಕೆಲಸ ಹಿಂದುಗಳ ಆರಾಧ್ಯ ದೈವ, ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಕುರಿತ ಪಠ್ಯವನ್ನು ಶಾಲೆಯ ಪುಸ್ತಕ ದಿಂದ ತೆಗೆದಿದ್ದು. ಇದು ಕರಾವಳಿ ಭಾಗದ ಹಿಂದುಳಿದ ವರ್ಗಗಳಿಗೆ ಮಾಡಿದ ಘೋರ ಅಪಮಾನ, ಅಂತೆಯೇ ಕರಾವಳಿಯ ಇನ್ನೊಬ್ಬ ಮೇಧಾವಿ, ಹೆಸರಾಂತ ಕವಿ ಕಯ್ಯಾರ ಕಿಂಞಣ್ಣ ರೈ ಅವರ ಕುರಿತ ಪಠ್ಯ ವನ್ನು ತೆಗೆದು ಹಾಕಿದ್ದು ಈ ಬಗ್ಗೆ ಬಂಟರ ಸಂಘದ ಒಕ್ಕೂಟ ಪ್ರಬಲವಾಗಿ ಖಂಡಿಸಿದೆ.

ಈ ರೀತಿಯಾಗಿ ಬಸವಣ್ಣ, ಕುವೆಂಪು, ಕನಕದಾಸರು ಆದಿಯಾಗಿ ಎಲ್ಲರ ಪಠ್ಯವನ್ನು ತೆಗೆದು, ವಿರೂಪಗೊಳಿಸಿ ರಾಜ್ಯದ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಲ್ಲದೆ ವಿಶೇಷವಾಗಿ ಕರಾವಳಿ ಭಾಗದಿಂದ ಗೆದ್ದು ಅಧಿಕಾರ ಪಡೆದು ಕರಾವಳಿ ಭಾಗದ ಪುಣ್ಯ ಪುರುಷರಿಗೆ ಪಠ್ಯ ಪುಸ್ತಕಗಳಲ್ಲಿ ಅವಮಾನ ಮಾಡಿರುವುದು ಖಂಡನೀಯ . ಇನ್ನಾದರೂ ಕರಾವಳಿ ಜನ ಬಿಜೆಪಿಯನ್ನು ದೂರ ಇಡಬೇಕಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

24 hours ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

1 day ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

1 day ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

1 day ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

1 day ago