Featured

ಉಡುಪಿ: ಇನ್ನು ಎಸೆಸೆಲ್ಸಿ ಅಂಕಪಟ್ಟಿ ತಿದ್ದುಪಡಿಗೆ ಅಲೆದಾಡಬೇಕಿಲ್ಲ – vishwanews24

ಉಡುಪಿ: ಇನ್ನು ಎಸೆಸೆಲ್ಸಿ ಅಂಕಪಟ್ಟಿ ತಿದ್ದುಪಡಿಗೆ ಅಲೆದಾಡಬೇಕಿಲ್ಲ

ಉಡುಪಿ: ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಅಭ್ಯರ್ಥಿ/ ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ ಹಾಗೂ ಇತರ ತಿದ್ದುಪಡಿಗಳಿಗೆ ಇನ್ನು ಮುಂದೆ ಆನ್‌ಲೈನ್‌ ಮೂಲಕ ಶಾಲಾ ಹಂತದಲ್ಲೇ ಅರ್ಜಿಗಳನ್ನು ಪಡೆಯಲಾಗುತ್ತದೆ. ಭೌತಿಕವಾಗಿ ಪ್ರಸ್ತಾವನೆ ಸ್ವೀಕರಿಸುವ ಪ್ರಕ್ರಿಯೆ ಇರದು.

ಇದುವರೆಗೆ ವಿದ್ಯಾರ್ಥಿಗಳು ಅಂಕಪಟ್ಟಿಯಲ್ಲಿನ ತಿದ್ದುಪಡಿಗಾಗಿ ಮುಖ್ಯ ಶಿಕ್ಷಕರ ಮೂಲಕ ಅಗತ್ಯ ದಾಖಲೆ ಮತ್ತು ನಿಗದಿತ ಶುಲ್ಕದೊಂದಿಗೆ ಪ್ರಸ್ತಾವನೆಯನ್ನು ಸಂಬಂಧಿಸಿದ ವಿಭಾ ಗೀಯ ಕಚೇರಿ ಅಥವಾ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ(ಈ ಹಿಂದೆ ಎಸೆಸೆಲ್ಸಿ ಬೋರ್ಡ್‌ ಇತ್ತು)ಗೆ ಸಲ್ಲಿಸಬೇಕಿತ್ತು. ವಿಭಾಗೀಯ ಕಚೇರಿಯಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಿ ಅರ್ಹರ ಅಂಕಪಟ್ಟಿ ತಿದ್ದುಪಡಿ ಮಾಡಿ ಸಂಬಂಧಿಸಿದ ಶಾಲೆಗೆ ರವಾನಿಸಲಾಗುತ್ತಿತ್ತು. ಇದಕ್ಕಾಗಿ ವಿದ್ಯಾರ್ಥಿಗಳು ಅಲೆದಾಡುವ ಜತೆಗೆ ಹೆಚ್ಚು ಸಮಯ ತಗಲುತ್ತಿತ್ತು.ಈ ಹಿನ್ನೆಲೆಯಲ್ಲಿ ಆನ್‌ ಲೈನ್‌ ವ್ಯವಸ್ಥೆಗೆ ಮಂಡಳಿಯು ಮುಂದಾಗಿದೆ.

ಆನ್‌ಲೈನ್‌ ವ್ಯವಸ್ಥೆ

ಅಂಕಪಟ್ಟಿಯಲ್ಲಿನ ತಿದ್ದುಪಡಿಗಾಗಿ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡಿದ ಶಾಲೆಯ ಮುಖ್ಯಶಿಕ್ಷಕರಿಗೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಮುಖ್ಯಶಿಕ್ಷಕರು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ ಮೂಲಕ ತಿದ್ದುಪಡಿಗೆ ಪ್ರಸ್ತಾವನೆ ಸಲ್ಲಿಸುವರು. ಶುಲ್ಕವನ್ನು ಆನ್‌ಲೈನ್‌/ ಚಲನ್‌ ಮೂಲಕ ಪಾವತಿಸಬಹುದು. ದಾಖಲೆ ಸಮೇತ ಪ್ರಸ್ತಾವನೆ ಅಪ್‌ಲೋಡ್‌ ಆದ ತತ್‌ಕ್ಷಣವೇ ವಿಭಾಗೀಯ ಕಚೇರಿ/ ಮಂಡಳಿಯ ಅಧಿಕಾರಿಗಳು ಪರಿಶೀಲಿಸಿ, ಶಾಲೆಯಿಂದ ಮೂಲ ಅಂಕಪಟ್ಟಿಯನ್ನು ಪಡೆದುಕೊಳ್ಳುವರು. ಇದನ್ನು ಆಧರಿಸಿ ತಿದ್ದುಪಡಿ ನಡೆಸಿ, ಪರಿಷ್ಕೃತ ಅಂಕಪಟ್ಟಿಯನ್ನು ಶಾಲೆಗೆ ಸ್ಪೀಡ್‌ ಪೋಸ್ಟ್‌ನಲ್ಲಿ ಕಳುಹಿಸಲಾಗುತ್ತದೆ.

ಮುಖ್ಯಶಿಕ್ಷಕರೇ ಹೊಣೆ

ಆನ್‌ಲೈನ್‌ ಮೂಲಕ ಪ್ರಸ್ತಾವನೆ ಸಲ್ಲಿಸುವಾಗ ಅಪ್‌ಲೋಡ್‌ ಮಾಡುವ ದಾಖಲೆಗಳನ್ನು ತಿದ್ದುಪಡಿ ಅಥವಾ ನಕಲಿಯಾಗಿದ್ದಲ್ಲಿ ಅಂತಹ ಶಾಲೆಯ ಮುಖ್ಯಶಿಕ್ಷಕರ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಮಂಡಳಿ ಎಚ್ಚರಿಸಿದೆ

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

4 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

4 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

6 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

7 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

7 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

7 hours ago