Featured

ಉಡುಪಿ: ಇನ್ನು ಎಸೆಸೆಲ್ಸಿ ಅಂಕಪಟ್ಟಿ ತಿದ್ದುಪಡಿಗೆ ಅಲೆದಾಡಬೇಕಿಲ್ಲ – vishwanews24

ಉಡುಪಿ: ಇನ್ನು ಎಸೆಸೆಲ್ಸಿ ಅಂಕಪಟ್ಟಿ ತಿದ್ದುಪಡಿಗೆ ಅಲೆದಾಡಬೇಕಿಲ್ಲ

ಉಡುಪಿ: ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಅಭ್ಯರ್ಥಿ/ ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ ಹಾಗೂ ಇತರ ತಿದ್ದುಪಡಿಗಳಿಗೆ ಇನ್ನು ಮುಂದೆ ಆನ್‌ಲೈನ್‌ ಮೂಲಕ ಶಾಲಾ ಹಂತದಲ್ಲೇ ಅರ್ಜಿಗಳನ್ನು ಪಡೆಯಲಾಗುತ್ತದೆ. ಭೌತಿಕವಾಗಿ ಪ್ರಸ್ತಾವನೆ ಸ್ವೀಕರಿಸುವ ಪ್ರಕ್ರಿಯೆ ಇರದು.

ಇದುವರೆಗೆ ವಿದ್ಯಾರ್ಥಿಗಳು ಅಂಕಪಟ್ಟಿಯಲ್ಲಿನ ತಿದ್ದುಪಡಿಗಾಗಿ ಮುಖ್ಯ ಶಿಕ್ಷಕರ ಮೂಲಕ ಅಗತ್ಯ ದಾಖಲೆ ಮತ್ತು ನಿಗದಿತ ಶುಲ್ಕದೊಂದಿಗೆ ಪ್ರಸ್ತಾವನೆಯನ್ನು ಸಂಬಂಧಿಸಿದ ವಿಭಾ ಗೀಯ ಕಚೇರಿ ಅಥವಾ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ(ಈ ಹಿಂದೆ ಎಸೆಸೆಲ್ಸಿ ಬೋರ್ಡ್‌ ಇತ್ತು)ಗೆ ಸಲ್ಲಿಸಬೇಕಿತ್ತು. ವಿಭಾಗೀಯ ಕಚೇರಿಯಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಿ ಅರ್ಹರ ಅಂಕಪಟ್ಟಿ ತಿದ್ದುಪಡಿ ಮಾಡಿ ಸಂಬಂಧಿಸಿದ ಶಾಲೆಗೆ ರವಾನಿಸಲಾಗುತ್ತಿತ್ತು. ಇದಕ್ಕಾಗಿ ವಿದ್ಯಾರ್ಥಿಗಳು ಅಲೆದಾಡುವ ಜತೆಗೆ ಹೆಚ್ಚು ಸಮಯ ತಗಲುತ್ತಿತ್ತು.ಈ ಹಿನ್ನೆಲೆಯಲ್ಲಿ ಆನ್‌ ಲೈನ್‌ ವ್ಯವಸ್ಥೆಗೆ ಮಂಡಳಿಯು ಮುಂದಾಗಿದೆ.

ಆನ್‌ಲೈನ್‌ ವ್ಯವಸ್ಥೆ

ಅಂಕಪಟ್ಟಿಯಲ್ಲಿನ ತಿದ್ದುಪಡಿಗಾಗಿ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡಿದ ಶಾಲೆಯ ಮುಖ್ಯಶಿಕ್ಷಕರಿಗೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಮುಖ್ಯಶಿಕ್ಷಕರು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ ಮೂಲಕ ತಿದ್ದುಪಡಿಗೆ ಪ್ರಸ್ತಾವನೆ ಸಲ್ಲಿಸುವರು. ಶುಲ್ಕವನ್ನು ಆನ್‌ಲೈನ್‌/ ಚಲನ್‌ ಮೂಲಕ ಪಾವತಿಸಬಹುದು. ದಾಖಲೆ ಸಮೇತ ಪ್ರಸ್ತಾವನೆ ಅಪ್‌ಲೋಡ್‌ ಆದ ತತ್‌ಕ್ಷಣವೇ ವಿಭಾಗೀಯ ಕಚೇರಿ/ ಮಂಡಳಿಯ ಅಧಿಕಾರಿಗಳು ಪರಿಶೀಲಿಸಿ, ಶಾಲೆಯಿಂದ ಮೂಲ ಅಂಕಪಟ್ಟಿಯನ್ನು ಪಡೆದುಕೊಳ್ಳುವರು. ಇದನ್ನು ಆಧರಿಸಿ ತಿದ್ದುಪಡಿ ನಡೆಸಿ, ಪರಿಷ್ಕೃತ ಅಂಕಪಟ್ಟಿಯನ್ನು ಶಾಲೆಗೆ ಸ್ಪೀಡ್‌ ಪೋಸ್ಟ್‌ನಲ್ಲಿ ಕಳುಹಿಸಲಾಗುತ್ತದೆ.

ಮುಖ್ಯಶಿಕ್ಷಕರೇ ಹೊಣೆ

ಆನ್‌ಲೈನ್‌ ಮೂಲಕ ಪ್ರಸ್ತಾವನೆ ಸಲ್ಲಿಸುವಾಗ ಅಪ್‌ಲೋಡ್‌ ಮಾಡುವ ದಾಖಲೆಗಳನ್ನು ತಿದ್ದುಪಡಿ ಅಥವಾ ನಕಲಿಯಾಗಿದ್ದಲ್ಲಿ ಅಂತಹ ಶಾಲೆಯ ಮುಖ್ಯಶಿಕ್ಷಕರ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಮಂಡಳಿ ಎಚ್ಚರಿಸಿದೆ

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

2 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

2 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

2 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

3 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

3 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

3 hours ago