ಉಡುಪಿ: ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ ಜತೆಗೆಎಲ್ಲ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ಸ್ಥಗಿತಗೊಳಿಸಲಾಗಿದೆ.
ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ. ಈ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸೆಪ್ಟೆಂಬರ್ 15ರ ವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸುತ್ತದೆ. ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಪ್ರತೀವರ್ಷ ಸ್ಥಗಿತಗೊಳಿಸಲಾಗುತ್ತದೆ.
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈಗ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಈ ಸುಂದರ ದ್ವೀಪಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೋಟ್ ಹಾಗೂ ಜಲಸಾಹಸ ಕ್ರೀಡೆಗೆ ಕೆಲವು ದಿನಗಳ ಮಟ್ಟಿಗೆ ಅವಕಾಶ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ.
ನಿಯಮಗಳ ಪ್ರಕಾರ ಮೇ 16ರಿಂದ 4 ತಿಂಗಳು ನಿಷೇಧವಿರಲಿದೆ. ಸಮುದ್ರ ತೀರದಲ್ಲಿ ವಾತಾವರಣದ ಅನುಕೂಲ ಆಧರಿಸಿ ಜೂನ್ 1 ರ ವರೆಗೆ ನೀರಿಗಿಳಿಯಬಹುದು. ಬಳಿಕ ಬೀಚ್ನ ಉದ್ದಕ್ಕೂ ತಡೆಬೇಲಿ ಹಾಕಲಾಗುತ್ತದೆ.ಹಾಗಾಗಿ ದೂರದೂರುಗಳ ಪ್ರವಾಸಿಗರು ಇನ್ನು ಮಳೆಗಾಲದ ನಂತರವೇ ಇಲ್ಲಿಗೆ ಬರುವುದು ಉತ್ತಮ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…