Featured

ಉಡುಪಿ : ಇನ್ನೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡದ ಜಿಲ್ಲಾ ಉಸ್ತುವಾರಿ ಸಚಿವೆ  – vishwanews24

ಉಡುಪಿ : ಇನ್ನೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡದ ಜಿಲ್ಲಾ ಉಸ್ತುವಾರಿ ಸಚಿವೆ

ಉಡುಪಿ : ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಸತತವಾಗಿ, ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆಯನ್ನು ಘೋಷಿಸಲಾಗಿತ್ತು. ಪುನರ್ವಸು ಮಳೆ ಮತ್ತೆ ಅಬ್ಬರಿಸುವ ಸಾಧ್ಯತೆಯಿದ್ದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿಯಲ್ಲಿ ಮಳೆಯಿಂದ ಪ್ರವಾಹ ಎದುರಾಗಿದ್ದರೂ, ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತ ಗಮನಹರಿಸದೇ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಲೋಕಸಭಾ ಚುನಾವಣೆಯ ವೇಳೆಯೂ ಜಿಲ್ಲಾ ಉಸ್ತುವಾರಿ ತಿಂಗಳಾನುಗಟ್ಟಲೆ ಉಡುಪಿ ಕಡೆ ತಲೆ ಹಾಕಿರಲಿಲ್ಲ.

ಎರಡು ದಿನಗಳ ಹಿಂದೆ ಮುಖ್ಯಮಂತ್ರಿಗಳು ಕರೆದಿದ್ದ ಜಿಲ್ಲಾಧಿಕಾರಿ / ಸಿಇಒ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು. ಅದಕ್ಕೂ ಮುನ್ನ, ಉಡುಪಿ ಜಿಲ್ಲೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮಾಹಿತಿ ಪಡೆದುಕೊಂಡಿದ್ದರು. ಜೂನ್ 4ಕ್ಕೆ ಚುನಾವಣಾ ಫಲಿತಾಂಶ ಬಂದ ಹತ್ತು ದಿನಗಳ ನಂತರ (ಜೂನ್ 13) ಸಚಿವೆ, ಉಡುಪಿಗೆ ಹೋಗಿದ್ದರು.

ಲೋಕಸಭೆ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಮಯದಲ್ಲಾಗಲೀ ಪಕ್ಷದ ಪ್ರಚಾರಕ್ಕೆ ಆಗಮಿಸದ ಸಚಿವೆಯ ನಡೆ ಸ್ವಪಕ್ಷೀಯರಿಂದಲೇ ತೀವ್ರ ಟೀಕೆಗೆ ಗುರಿಯಾಗಿತ್ತು. ಕೊನೆಗೂ, ಉಡುಪಿಗೆ ಆಗಮಿಸಿದ್ದ ಲಕ್ಷ್ಮೀ ಹೆಬ್ಬಾಳ್ಕರ್, ಜಿಲ್ಲಾ ಕಚೇರಿಯಲ್ಲಿ ಇಲಾಖಾ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು.

ಇದಾದ ನಂತರ ಜಿಲ್ಲಾ ಉಸ್ತುವಾರಿ ಉಡುಪಿ ಕಡೆ ಆಗಮಿಸಿರಲಿಲ್ಲ. ಕಳೆದ ವಾರದಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತು, ಕಡಲ್ಕೊರೆತ ಜೋರಾಗಿದೆ. ಮಳೆ, ಪ್ರವಾಹ, ನೆರೆ, ಆಸ್ತಿಪಾಸ್ತಿ ನಷ್ಟ, ಜನಜೀವನ ಅಸ್ತವ್ಯಸ್ತ ಉಂಟಾಗಿದ್ದರೂ ಲಕ್ಷ್ಮೀ ಹೆಬ್ಬಾಳ್ಕರ್ ಈ ಕಡೆ ಬರದೇ ಇದ್ದದ್ದು, ಸ್ಥಳೀಯರ ಕೋಪಕ್ಕೆ ಕಾರಣವಾಗಿದೆ.

ಉಡುಪಿಯ ಪ್ರವಾಹದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ” ಎರಡು ವಾರದ ಹಿಂದೆ ಜಿಲ್ಲಾ ಮಟ್ಟದ ಸಭೆಯನ್ನು ನಡೆಸಿ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದೇನೆ. ನನ್ನ ಸೂಚನೆಯ ಮೇರೆಗೆ ಅರಣ್ಯ ಇಲಾಖೆಯವರು 450 ಮರಗಳನ್ನು ತೆಗೆದಿದ್ದಾರೆ. ಬೀಳುವ ಹಂತದಲ್ಲಿದ್ದ 80 ವಿದ್ಯುತ ಕಂಬಗಳನ್ನು ತೆಗೆಯಲಾಗಿದೆ. ಒಳಚರಂಡಿ ವ್ಯವಸ್ಥೆಯನ್ನು ಸರಿ ಮಾಡಲಾಗಿತ್ತು. ಹಿಂದಿನ ವರ್ಷದ ಅನುಭವ ಇದ್ದಿದ್ದಾರಿಂದ ಮುಂಜಾಗೃತಾ ಕ್ರಮವನ್ನು ತೆಗೆದುಕೊಂಡಿದ್ದೆವು ” ಎಂದು ಸಚಿವೆ ಹೇಳಿದ್ದಾರೆ.

” ಲಕ್ಷ್ಮೀ ಹೆಬ್ಬಾಳ್ಕರ್ ಕಾಣೆಯಾಗಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರೆ ಏನು ಪ್ರಯೋಜನ? ಉಸ್ತುವಾರಿಯನ್ನು ಸಿಎಂ ಪ್ರಶ್ನಿಸಬೇಕು. ಉಡುಪಿ ಜಿಲ್ಲೆಯೆಂದರೆ ಸರ್ಕಾರಕ್ಕೆ ನಿರ್ಲ್ಯಕ್ಷ, ಪ್ರವಾಹ ವಿಚಾರದಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ” ಎಂದು ಸ್ಥಳೀಯ ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago