Featured

ಉಡುಪಿ : ಇನ್ನೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡದ ಜಿಲ್ಲಾ ಉಸ್ತುವಾರಿ ಸಚಿವೆ  – vishwanews24

ಉಡುಪಿ : ಇನ್ನೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡದ ಜಿಲ್ಲಾ ಉಸ್ತುವಾರಿ ಸಚಿವೆ

ಉಡುಪಿ : ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಸತತವಾಗಿ, ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆಯನ್ನು ಘೋಷಿಸಲಾಗಿತ್ತು. ಪುನರ್ವಸು ಮಳೆ ಮತ್ತೆ ಅಬ್ಬರಿಸುವ ಸಾಧ್ಯತೆಯಿದ್ದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿಯಲ್ಲಿ ಮಳೆಯಿಂದ ಪ್ರವಾಹ ಎದುರಾಗಿದ್ದರೂ, ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತ ಗಮನಹರಿಸದೇ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಲೋಕಸಭಾ ಚುನಾವಣೆಯ ವೇಳೆಯೂ ಜಿಲ್ಲಾ ಉಸ್ತುವಾರಿ ತಿಂಗಳಾನುಗಟ್ಟಲೆ ಉಡುಪಿ ಕಡೆ ತಲೆ ಹಾಕಿರಲಿಲ್ಲ.

ಎರಡು ದಿನಗಳ ಹಿಂದೆ ಮುಖ್ಯಮಂತ್ರಿಗಳು ಕರೆದಿದ್ದ ಜಿಲ್ಲಾಧಿಕಾರಿ / ಸಿಇಒ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು. ಅದಕ್ಕೂ ಮುನ್ನ, ಉಡುಪಿ ಜಿಲ್ಲೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮಾಹಿತಿ ಪಡೆದುಕೊಂಡಿದ್ದರು. ಜೂನ್ 4ಕ್ಕೆ ಚುನಾವಣಾ ಫಲಿತಾಂಶ ಬಂದ ಹತ್ತು ದಿನಗಳ ನಂತರ (ಜೂನ್ 13) ಸಚಿವೆ, ಉಡುಪಿಗೆ ಹೋಗಿದ್ದರು.

ಲೋಕಸಭೆ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಮಯದಲ್ಲಾಗಲೀ ಪಕ್ಷದ ಪ್ರಚಾರಕ್ಕೆ ಆಗಮಿಸದ ಸಚಿವೆಯ ನಡೆ ಸ್ವಪಕ್ಷೀಯರಿಂದಲೇ ತೀವ್ರ ಟೀಕೆಗೆ ಗುರಿಯಾಗಿತ್ತು. ಕೊನೆಗೂ, ಉಡುಪಿಗೆ ಆಗಮಿಸಿದ್ದ ಲಕ್ಷ್ಮೀ ಹೆಬ್ಬಾಳ್ಕರ್, ಜಿಲ್ಲಾ ಕಚೇರಿಯಲ್ಲಿ ಇಲಾಖಾ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು.

ಇದಾದ ನಂತರ ಜಿಲ್ಲಾ ಉಸ್ತುವಾರಿ ಉಡುಪಿ ಕಡೆ ಆಗಮಿಸಿರಲಿಲ್ಲ. ಕಳೆದ ವಾರದಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತು, ಕಡಲ್ಕೊರೆತ ಜೋರಾಗಿದೆ. ಮಳೆ, ಪ್ರವಾಹ, ನೆರೆ, ಆಸ್ತಿಪಾಸ್ತಿ ನಷ್ಟ, ಜನಜೀವನ ಅಸ್ತವ್ಯಸ್ತ ಉಂಟಾಗಿದ್ದರೂ ಲಕ್ಷ್ಮೀ ಹೆಬ್ಬಾಳ್ಕರ್ ಈ ಕಡೆ ಬರದೇ ಇದ್ದದ್ದು, ಸ್ಥಳೀಯರ ಕೋಪಕ್ಕೆ ಕಾರಣವಾಗಿದೆ.

ಉಡುಪಿಯ ಪ್ರವಾಹದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ” ಎರಡು ವಾರದ ಹಿಂದೆ ಜಿಲ್ಲಾ ಮಟ್ಟದ ಸಭೆಯನ್ನು ನಡೆಸಿ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದೇನೆ. ನನ್ನ ಸೂಚನೆಯ ಮೇರೆಗೆ ಅರಣ್ಯ ಇಲಾಖೆಯವರು 450 ಮರಗಳನ್ನು ತೆಗೆದಿದ್ದಾರೆ. ಬೀಳುವ ಹಂತದಲ್ಲಿದ್ದ 80 ವಿದ್ಯುತ ಕಂಬಗಳನ್ನು ತೆಗೆಯಲಾಗಿದೆ. ಒಳಚರಂಡಿ ವ್ಯವಸ್ಥೆಯನ್ನು ಸರಿ ಮಾಡಲಾಗಿತ್ತು. ಹಿಂದಿನ ವರ್ಷದ ಅನುಭವ ಇದ್ದಿದ್ದಾರಿಂದ ಮುಂಜಾಗೃತಾ ಕ್ರಮವನ್ನು ತೆಗೆದುಕೊಂಡಿದ್ದೆವು ” ಎಂದು ಸಚಿವೆ ಹೇಳಿದ್ದಾರೆ.

” ಲಕ್ಷ್ಮೀ ಹೆಬ್ಬಾಳ್ಕರ್ ಕಾಣೆಯಾಗಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರೆ ಏನು ಪ್ರಯೋಜನ? ಉಸ್ತುವಾರಿಯನ್ನು ಸಿಎಂ ಪ್ರಶ್ನಿಸಬೇಕು. ಉಡುಪಿ ಜಿಲ್ಲೆಯೆಂದರೆ ಸರ್ಕಾರಕ್ಕೆ ನಿರ್ಲ್ಯಕ್ಷ, ಪ್ರವಾಹ ವಿಚಾರದಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ” ಎಂದು ಸ್ಥಳೀಯ ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

17 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

17 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

20 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

21 hours ago