ಉಡುಪಿ : ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ಗೆ ದಾಳಿ ಮಾಡಿದ ಮಣಿಪಾಲ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.
ಬಾರ್ವೊಂದರಲ್ಲಿ ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ಮಣಿಪಾಲದ ವಿದ್ಯಾರ್ಥಿಗಳು ಪಾರ್ಟಿ ಮಾಡಿದ ಹಾಗೂ ಹುಕ್ಕಾ, ಮದ್ಯ ಸೇವನೆಯ ವಿಡಿಯೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದರು. ವೀಕೆಂಡ್ ಬಂದೋಬಸ್ತ್ ನಲ್ಲಿದ್ದ ಪೊಲೀಸರು ವಿಷಯ ತಿಳಿಯುತ್ತಿದ್ದಂತೆ ಮಿಂಚಿನ ಕಾರ್ಯಾಚರಣೆ ನಡೆಸಿ ಬಾರ್ ಮೇಲೆ ದಾಳಿ ನಡೆಸಿದ್ದಾರೆ.
ಇನ್ನು ಮಣಿಪಾಲ ವೃತ್ತ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಉಡುಪಿ ತಾಲೂಕಿನ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್ ಸ್ಟೇಸಿ ಬಾರ್ ಮೇಲೆ ದಾಳಿ ನಡೆಸಿದೆ. ಈ ವೇಳೆ ಅನುಮತಿ ಇಲ್ಲದೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಬಾರ್ನಲ್ಲಿ ಡಿಜೆ ಪಾರ್ಟಿ ಮಾಡಲು ಅನುಮತಿ ನೀಡಿದ ಬಾರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರತಿ ವೀಕೆಂಡ್ನಲ್ಲೂ ಮಣಿಪಾಲ ಪೊಲೀಸರು ಮಣಿಪಾಲದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…