ಉಡುಪಿ : ಜಿಲ್ಲೆಯ ತೋಟಗಾರಿಕಾ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕಾ ಕಸಿ ಅಥವಾ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ, ಕಸಿಗೇರು, ಕಾಳುಮೆಣಸು, ಕಸಿ ಕಾಳು ಮೆಣಸು, ತೆಂಗು ಹಾಗೂ ಮಲ್ಲಿಗೆ ಗಿಡಗಳನ್ನು ಉತ್ಪಾದಿಸಲಾಗುತ್ತಿದ್ದು, ಆಸಕ್ತ ರೈತರು ಇದರ ಸದುಪಯೋಗಪಡೆದುಕೊಳ್ಳಬಹುದು.
ಜಿಲ್ಲೆಯ ರೈತರು ಅಡಿಕೆ (20 ರೂ.), ಕಸಿ ಗೇರು (32 ರೂ.), ಕಾಳುಮೆಣಸು (11 ರೂ.), ತೆಂಗು (70 ರೂ.), ಕಸಿ ಕಾಳುಮೆಣಸು (32 ರೂ.) ಹಾಗೂ ಮಲ್ಲಿಗೆ (10 ರೂ.) ಗಿಡಗಳನ್ನು ಖರೀದಿಸಲು ಸಂಬAಧಪಟ್ಟ ತೋಟಗಾರಿಕಾ ಕ್ಷೇತ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಶಿವಳ್ಳಿ ತೋಟಗಾರಿಕಾ ಕ್ಷೇತ್ರದ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ನಿಧಿಶ ಕೆ.ಜೆ ಮೊ.ನಂ: 9742489714, ವಾರಂಬಳ್ಳಿ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ರಾಮ ನರಸಿಂಹ ಹೆಗಡೆ ಮೊ.ನಂ. 9481864481, ಕೆದೂರು ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಮಧುಕರ್ ಮೊ.ನಂ.9482166313, ಕುಂಭಾಶಿ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಅಜಿತ ಅಕ್ಕೊಳ್ಳಿ ಮೊ.ನಂ. 9481721482, ರಾಮಸಮುದ್ರ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ನಿರ್ದೇಶಕ ವರುಣ ಕೆ.ಜೆ ಮೊ. ನಂ. 7892326323 ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಚಿದಾನಂದ ಕಳಕಾಪುರ ಮೊ.ನಂ.9108344017 ಅನ್ನು ಸಂಪರ್ಕಿಸುವAತೆ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…