ಉಡುಪಿ : ಹಿಜಾಬ್-ಕೇಸರಿ ಶಾಲು ವಿವಾದದಿಂದ ಜಿಲ್ಲೆಯಲ್ಲಿ ಅ ಶಾಂತಿಯ ವಾತಾವರಣ ಸೃಷ್ಟಿ ಮಾಡವ ನಿಟ್ಟಿನಲ್ಲಿ, ಕೆಲ ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ನೀಡುತ್ತಿದ್ದಾರೆ, ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವರಿಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಹಿಜಾಬ್-ಕೇಸರಿ ಶಾಲು ವಿವಾದದಿಂದ ಭಾರತದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವ ನಿಟ್ಟಿನಲ್ಲಿ, ಈ ವಿಚಾರವನ್ನು ದೊಡ್ಡ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೆ 12 ಮುಸ್ಲಿಂ ವಿದ್ಯಾರ್ಥಿನಿಯರನ್ನು ಮುಂದಿಟ್ಟುಕೊಂಡು ಜಿಲ್ಲೆಯಲ್ಲಿ ಕೋಮು ಗಲಭೆ ಮತ್ತು ಮತೀಯಾವಾದ ಸೃಷ್ಟಿಸಿ, ಅ ಶಾಂತಿ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ, ಇಸ್ಲಾಂ ಸಂಘಟನೆಗಳಾದ ಎಸ್.ಡಿ.ಪಿ.ಐ. ಮತ್ತು ಸಿ.ಎಫ್.ಐ. ಹುನ್ನಾರ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಇಸ್ಲಾಂ ಸಂಘಟನೆಗಳ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…