ಉಡುಪಿ: ಕೇಂದ್ರ ಸರ್ಕಾರದ ಸಾಮಾಜಿಕ ಬದ್ಧತೆಯ ಪ್ರಮುಖ ಯೋಜನೆಯಾದ ಖಾಸಗಿ ರಂಗದ ಕಾರ್ಮಿಕರಿಗೆ / ಉದ್ಯೋಗಿಗಳಿಗೆಇ ಎಸ್ ಐ ಸೌಲಭ್ಯದ ವೇತನ ಮಿತಿಯನ್ನು ₹ 30,000 ಕ್ಕೆ ಏರಿಕೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಇಲಾಖೆಯ ಸಚಿವರಾದ ಶೋಭಾ ಕರಂದ್ಲಾಜೆ ಯವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿ ಮಾಡಿದರು.
ಈ ಹಿಂದೆ ಇದ್ದ 15 ಸಾವಿರ ವೇತನ ಮಿತಿಯನ್ನು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 22 ಡಿಸೆಂಬರ್ 2016 ರಂದು 21 ಸಾವಿರಕ್ಕೆ ಏರಿಕೆ ಮಾಡಿ ದೇಶದ ಕೋಟ್ಯಾಂತರ ಕಾರ್ಮಿಕರು/ಉದ್ಯೋಗಿಗಳು ಹಾಗೂ ಅವರ ಕುಟುಂಬಕ್ಕೆ ಯೋಜನೆಯ ಮೂಲಕ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಿತ್ತು.
ಕಳೆದ 8 ವರ್ಷಗಳಿಂದ ಇ ಎಸ್ ಐ ಸೌಲಭ್ಯಕ್ಕೆ ಅರ್ಹ ವೇತನ ಮಿತಿ ಏರಿಕೆಯಾಗದ ಕಾರಣ 21 ಸಾವಿರ ಮೇಲ್ಪಟ್ಟ ವೇತನ ಶ್ರೇಣಿಯ ಕಾರ್ಮಿಕರು ಯೋಜನೆಯಿಂದ ವಂಚಿತರಾಗುತ್ತಿದ್ದಾರೆ.
ವರ್ಷದಿಂದ ವರ್ಷಕ್ಕೆ ಖಾಸಗಿ ಕ್ಷೇತ್ರದಲ್ಲಿ ನೀಡಲಾಗುವ ವಾರ್ಷಿಕ ಭಡ್ತಿ, ಬೆಲೆ ಏರಿಕೆ ಅನುಗುಣವಾಗಿ ವೇತನ ಏರಿಕೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಪ್ರಸ್ತುತ ಇರುವ 21 ಸಾವಿರ ವೇತನ ಮಿತಿಯನ್ನು 30 ಸಾವಿರಕ್ಕೆ ಏರಿಕೆ ಮಾಡಿದರೆ ಕಾರ್ಮಿಕ ವರ್ಗಕ್ಕೆ ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದು ಸಚಿವರಿಗೆ ಮನವಿ ಮಾಡಿದರು.
ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವೆ ಶೋಭಾ ಕರಂದ್ಲಾಜೆ ದೇಶದ ಕಾರ್ಮಿಕರ ಹಿತದೃಷ್ಟಿಯಿಂದ ಯೋಜನೆಯ ವೇತನ ಮಿತಿ ಏರಿಕೆಗೆ ಕ್ರಮವಹಿಸುವ ಭರವಸೆ ನೀಡಿದರು.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…