ಉಡುಪಿ: ಕೇಂದ್ರ ಸರ್ಕಾರದ ಸಾಮಾಜಿಕ ಬದ್ಧತೆಯ ಪ್ರಮುಖ ಯೋಜನೆಯಾದ ಖಾಸಗಿ ರಂಗದ ಕಾರ್ಮಿಕರಿಗೆ / ಉದ್ಯೋಗಿಗಳಿಗೆಇ ಎಸ್ ಐ ಸೌಲಭ್ಯದ ವೇತನ ಮಿತಿಯನ್ನು ₹ 30,000 ಕ್ಕೆ ಏರಿಕೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಇಲಾಖೆಯ ಸಚಿವರಾದ ಶೋಭಾ ಕರಂದ್ಲಾಜೆ ಯವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿ ಮಾಡಿದರು.
ಈ ಹಿಂದೆ ಇದ್ದ 15 ಸಾವಿರ ವೇತನ ಮಿತಿಯನ್ನು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 22 ಡಿಸೆಂಬರ್ 2016 ರಂದು 21 ಸಾವಿರಕ್ಕೆ ಏರಿಕೆ ಮಾಡಿ ದೇಶದ ಕೋಟ್ಯಾಂತರ ಕಾರ್ಮಿಕರು/ಉದ್ಯೋಗಿಗಳು ಹಾಗೂ ಅವರ ಕುಟುಂಬಕ್ಕೆ ಯೋಜನೆಯ ಮೂಲಕ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಿತ್ತು.
ಕಳೆದ 8 ವರ್ಷಗಳಿಂದ ಇ ಎಸ್ ಐ ಸೌಲಭ್ಯಕ್ಕೆ ಅರ್ಹ ವೇತನ ಮಿತಿ ಏರಿಕೆಯಾಗದ ಕಾರಣ 21 ಸಾವಿರ ಮೇಲ್ಪಟ್ಟ ವೇತನ ಶ್ರೇಣಿಯ ಕಾರ್ಮಿಕರು ಯೋಜನೆಯಿಂದ ವಂಚಿತರಾಗುತ್ತಿದ್ದಾರೆ.
ವರ್ಷದಿಂದ ವರ್ಷಕ್ಕೆ ಖಾಸಗಿ ಕ್ಷೇತ್ರದಲ್ಲಿ ನೀಡಲಾಗುವ ವಾರ್ಷಿಕ ಭಡ್ತಿ, ಬೆಲೆ ಏರಿಕೆ ಅನುಗುಣವಾಗಿ ವೇತನ ಏರಿಕೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಪ್ರಸ್ತುತ ಇರುವ 21 ಸಾವಿರ ವೇತನ ಮಿತಿಯನ್ನು 30 ಸಾವಿರಕ್ಕೆ ಏರಿಕೆ ಮಾಡಿದರೆ ಕಾರ್ಮಿಕ ವರ್ಗಕ್ಕೆ ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದು ಸಚಿವರಿಗೆ ಮನವಿ ಮಾಡಿದರು.
ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವೆ ಶೋಭಾ ಕರಂದ್ಲಾಜೆ ದೇಶದ ಕಾರ್ಮಿಕರ ಹಿತದೃಷ್ಟಿಯಿಂದ ಯೋಜನೆಯ ವೇತನ ಮಿತಿ ಏರಿಕೆಗೆ ಕ್ರಮವಹಿಸುವ ಭರವಸೆ ನೀಡಿದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…