ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿರುವುದು ಬಿಜೆಪಿ ಸರ್ಕಾರ ಇರುವುದೇ ಭ್ರಷ್ಟರನ್ನು ರಕ್ಷಣೆ ಮಾಡುವುದಕ್ಕೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಆಗಿರುವ ಕೃಷ್ಣಮೂರ್ತಿ ಆಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು ಆತ್ಮಹತ್ಯೆಗೆ ಮೊದಲು ಮೃತ ಸಂತೋಷ್ ಪಾಟೀಲ್ ಬರೆದಿಟ್ಟ ಪತ್ರದಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹಣ ಬಿಡುಗಡೆ ಮಾಡದೆ ಇದ್ದರೆ ಆತ್ಮಹತ್ಯೆಯೊಂದೇ ಆಯ್ಕೆಯಾಗುತ್ತದೆ ಎಂದೂ ಹೇಳಿದ್ದರು. ಸಚಿವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಲು ಇನ್ನು ಯಾವ ಸಾಕ್ಷಿ ಬೇಕು?
ಈ ಬಿಜೆಪಿ ಸರ್ಕಾರ ತಮ್ಮ ಪಕ್ಷದ ನಾಯಕ ಆರೋಪಿ ಈಶ್ವರಪ್ಪ ರ ರಕ್ಷಣೆ ಮಾಡಲು ಜನರಿಗೆ ನ್ಯಾಯ ಕೊಡಬೇಕಾದ ಸರ್ಕಾರಿ ಇಲಾಖೆಗಳಿಗೆ ಒತ್ತಡ ಏರಿ ಆರೋಪಿ ಭ್ರಷ್ಟರನ್ನು ರಕ್ಷಣೆ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ .
ಮಾಜಿ ಸಚಿವರ ವಿರುದ್ಧ ಸಂತೋಷ್ ಪಾಟೀಲ್ ನೇರ ಆರೋಪ ಮಾಡಿದ್ದರು. ಸಾವಿಗೆ ಕಾರಣ ಈಶ್ವರಪ್ಪ ಅಂತ ಹೇಳಿದ್ದರು. ಅದರೆ ಬಿ-ರಿಪೋರ್ಟ್ ಹಾಕಿ ಕೇಸ್ ಕ್ಲೋಸ್ ಮಾಡಿದ್ದಾರೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಾ ಡಿಪಾರ್ಟ್ ಮೆಂಟ್ ಪೇಲ್ಯೂರ್ ಆಗಿದೆ ಎಂದರು.
ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ. ಅವರ ಪತ್ನಿಯೇ ನ್ಯಾಯ ಸಿಗಲ್ಲ ಅಂತ ರಾಜ್ಯಪಾಲರಿಗೆ ಪತ್ರವನ್ನು ಬರೆದಿದ್ದರು. ಬಹುಶಃ ಈಶ್ವರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿಯವರನ್ನ ಹೆದರಿಸಿರಬಹುದು. ಅದಕ್ಕೆ ಹೆದರಿ ಅಧಿಕಾರಿಗಳ ಮೂಲಕ ಕೇಸ್ ಮುಚ್ಚಿಸಿರಬಹುದು. ಅವರ ಕುಟುಂಬದ ದುಃಖ ಇನ್ನೂ ಮರೆಯಾಗಿಲ್ಲ. ಅಷ್ಟರೊಳಗೆ ಬಿ ರಿಪೋರ್ಟ್ ಹಾಕಿದ್ದಾರೆ. ಸರ್ಕಾರವೇ ತಮ್ಮ ಪಕ್ಷದ ನಾಯಕ ಆರೋಪಿ ಈಶ್ವರಪ್ಪ ರ ರಕ್ಷಣೆ ಮಾಡುವಲ್ಲಿ ಶಾಮೀಲಾಗಿದೆ. ಇದೇ ರೀತಿ ಅದರೆ ಮುಂದೆ ಕಾಂಟ್ರಾಕ್ಟ್ ಕೆಲಸ ಮಾಡಲು ಸಮಾನ್ಯ ಜನರು ಯಾರು ಮುಂದೆ ಬರುತ್ತಾರೆ ಎಲ್ಲಿದೆ ನ್ಯಾಯ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…