Featured

ಉಡುಪಿ: ಈಶ್ವರಪ್ಪಗೆ ತಾಕತ್ತಿದ್ದರೆ ಅವರ ಸರಕಾರಿ ಕಾರಿನ ಎದುರು ಕೇಸರಿ ಧ್ವಜ ಹಾರಿಸಲಿ : ಜಿಲ್ಲಾ ಕಾಂಗ್ರೆಸ್ – Vishwanews24

ಉಡುಪಿ: ಈಶ್ವರಪ್ಪಗೆ ತಾಕತ್ತಿದ್ದರೆ ಅವರ ಸರಕಾರಿ ಕಾರಿನ ಎದುರು ಕೇಸರಿ ಧ್ವಜ ಹಾರಿಸಲಿ..

ಈಶ್ವರಪ್ಪನವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ಸೂಕ್ತ ಪ್ರಕರಣವನ್ನು ದಾಖಲಿಸಿ..

ಉಡುಪಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಅಜ್ಜರಕಾಡು ಸೈನಿಕರ ಸ್ಮಾರಕದ ಬಳಿ ಪ್ರತಿಭಟನೆ..

ಉಡುಪಿ: ಸಚಿವ ಈಶ್ವರಪ್ಪನವರಿಗೆ ತಾಕತ್ತಿದ್ದರೆ ಅವರ ಸರಕಾರಿ ಕಾರಿನ ಎದುರು ಮೊದಲು ಕೇಸರಿ ದ್ವಜ ಹಾರಿಸಲಿ. ಸಂವಿಧಾನದ ರಕ್ಷಣೆಯ ಪವಿತ್ರವಾದ ಜವಾಬ್ದಾರಿಯನ್ನು ಹೊಂದಿರುವ ರಾಜ್ಯಪಾಲರು ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತಮ್ಮ ಸಂವಿಧಾನದತ್ತ ಅಧಿಕಾರವನ್ನು ಚಲಾಯಿಸಿ, ತಕ್ಷಣವೇ ಈಶ್ವರಪ್ಪನವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ಸೂಕ್ತ ಪ್ರಕರಣವನ್ನು ದಾಖಲಿಸುವಂತೆ ದಾಖಲಿಸಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಆಗ್ರಹಿಸಿದರು.

ಉಡುಪಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಷ್ಟ್ರಧ್ವಜವನ್ನು ಅವಮಾನ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ ಅವರ ವಿರುದ್ಧ ಇಂದು ಅಜ್ಜರಕಾಡು ಸೈನಿಕರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಅಶೋಕ್ ಕುಮಾರ್ ಮಾತನಾಡಿ, ” ದಿನ ಬೆಳಗಾದರೆ ಬಿಜೆಪಿಯವರು ಹಿಂದುತ್ವ, ಸಂವಿಧಾನದ ಬಗ್ಗೆ , ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ಈ ದೇಶವನ್ನು ಜಾತಿ , ಧರ್ಮ ಆಧಾರಿತವಾಗಿ ವಿಭಜನೆ ಮಾಡುತ್ತಿದ್ದು, ಸಂವಿಧಾನದ ಮೂಲಕ್ಕೆ ಕೊಡಲಿ ಏಟು ಹಾಕುತ್ತಿದ್ದಾರೆ. ಗಾಂಧೀಜಿಯಾ ಜನ್ಮ ದಿನವನ್ನು ಆಚರಿಸುತ್ತಾರೆ. ಒಳಗಿನಿಂದ ಅವರನ್ನು ವಿರೋಧಿಸುತ್ತಾರೆ” ಎಂದರು.

ಇನ್ನು ಪವಿತ್ರವಾದ ತ್ರಿವರ್ಣ ದ್ವಜದಡಿಯಲ್ಲಿ ಸ್ವಾತಂತ್ರ್ಯ ಪಡೆದುಕೊಂಡಿದ್ದೇವೆ ಕರ್ನಾಟಕ ಸರಕಾರದಲ್ಲಿ ಸಚಿವರಾಗಿರುವ ಕೆ.ಎಸ್. ಈಶ್ವರಪ್ಪನವರು ಇತ್ತೀಚೆಗೆ ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆಯನ್ನು ಕೊಟ್ಟಿರುತ್ತಾರೆ. ಇದು ಅತ್ಯಂತ ಅಪಾಯಕಾರಿ ದೇಶದ್ರೋಹದ ಹೇಳಿಕೆಯಾಗಿದೆ. ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ್ಯ, ಅಖಂಡತೆ, ಸಾರ್ವಭೌಮತೆ, ಅಸ್ಮಿತೆ ಮತ್ತು ಸಂವಿಧಾನಗಳ ಸಂಕೇತವಾಗಿದೆ. ಹಾಗಾಗಿ, ಈಶ್ವರಪ್ಪನವರ ಹೇಳಿಕೆಯಿಂದ ದೇಶದ ಪ್ರಜೆಗಳಿಗೆ ದಿಗ್ಧಮೆಯಾಗಿದೆ. ಇದನ್ನು ವಿರೋಧಿಸಿ, ಈಶ್ವರಪ್ಪನವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಟ್ಟು ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ ರಾಷ್ಟ್ರಧ್ವಜದ ಗೌರವವನ್ನು ಎತ್ತಿ ಹಿಡಿಯುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಶಾಸಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿಯನ್ನು ಮಾಡುತ್ತಿದ್ದಾರೆ.

ರಾಷ್ಟ್ರಾಭಿಮಾನಿ ಜನ ದೇಶದ್ರೋಹದ ಹೇಳಿಕೆಗಳನ್ನು, ಸಂವಿಧಾನದ ಆಶಯಗಳಿಗೆ ಧಕ್ಕೆಯಾಗುವ ವಿಚಾರಗಳನ್ನು ಮತ್ತು ರಾಷ್ಟ್ರ ಲಾಂಛನಗಳಿಗೆ ಅಪಮಾನವನ್ನು ಸಹಿಸಲಾಗುವುದಿಲ್ಲ ಮತ್ತು ಇಂತಹ ಘಟನೆಗಳೊಂದಿಗೆ ರಾಜಿ ಮಾಡಿಕೊಳ್ಳುವ ವಿಷಯವೇ ಇರುವುದಿಲ್ಲ. ಹೀಗಿರುವಾಗ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ವ್ಯಕ್ತಿಯೊಬ್ಬ ರಾಜ್ಯದ ಸಚಿವನಾಗಿರುವುದನ್ನು ಕಲ್ಪಿಸಲೂ ಸಾಧ್ಯವಿಲ್ಲ. ದಯವಿಟ್ಟು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕೆಂದು ಎಂದು ಆಗ್ರಹಿಸಿದರು

ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡರಾದ ಕುಶಾಲ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉದ್ಯಾವರ ನಾಗೇಶ್ ಕುಮಾರ್, ಶಬ್ಬೀರ್ ಅಹಮದ್, ಪ್ರಖ್ಯಾತ ಶೆಟ್ಟಿ, ಹರೀಶ್ ಶೆಟ್ಟಿ ಪಾಂಗಳ, ಕೀರ್ತಿ ಶೆಟ್ಟಿ, ಪ್ರಶಾಂತ್ ಜತ್ತನ್ನ, ಯತೀಶ್ ಕರ್ಕೇರ, ರಮೇಶ್ ಕಾಂಚನ್, ಮುರಳಿ ಶೆಟ್ಟಿ, ಗಣೇಶ್ ನೆರ್ಗಿ, ಗೋಪಾಲಕೃಷ್ಣ ಶೆಟ್ಟಿ, ಲಕ್ಷ್ಮಣ ಪೂಜಾರಿ, ವಿಜಯ ಪೂಜಾರಿ, ಉಪೇಂದ್ರ ಮೆಂಡನ್, ನಾರಾಯಣ್ ಕುಂದರ್, ವತ್ಸಲಾ ವಿನೋದ್, ಸುರೇಶ್ ಕುಮಾರ್, ಪ್ರಶಾಂತ್ ಪೂಜಾರಿ, ಸತೀಶ್ ಮಂಚಿ, ಲಕ್ಷ್ಮಣ ಶೆಟ್ಟಿ, ಸೂರಜ್ ಕಲ್ಮಾಡಿ, ಸಾಯಿರಾಜ್, ಡಿಯೋನ್ ಮೊದಲಾದವರು ಭಾಗವಹಿಸಿದ್ದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

23 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

23 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

23 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

23 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

23 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago