ಮಲ್ಪೆ: ಮುಳುಗುತಜ್ಞ, ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ ಬಂದಿದ್ದು, ಕೇರಳದ ಕೋಯಿಕ್ಕೋಡ್ನ ಮಲ್ಟಿ ಸ್ಪೆಶಾಲಿಟಿ ಮೈತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳಾದ ಕಾರ್ತಿಕ್ (23), ಬ್ರಾಹ್ಮಿ (7) ಅನಾರೋಗ್ಯ ಪೀಡಿತರಾಗಿದ್ದು, ವೈದ್ಯಕೀಯ ಚಿಕಿತ್ಸೆಗಳಿಗೆ ಲಕ್ಷಾಂತರ ರೂ. ವ್ಯಯಿಸಬೇಕಿದೆ. ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದ ಅರ್ಜುನ್ ಮೃತ ದೇಹವನ್ನು ಪತ್ತೆ ಮಾಡಲು ಈಶ್ವರ್ ಮಲ್ಪೆ ತಂಡ ಮಹತ್ವದ ಪಾತ್ರ ವಹಿಸಿದ್ದರು. ಇದರಿಂದಾಗಿ ಇವರ ಬಗ್ಗೆ ಕೇರಳದಲ್ಲಿ ಅಭಿಮಾನ ಹೆಚ್ಚಾಗಿದ್ದು, ಕುಟುಂಬದ ಸಮಸ್ಯೆಯರಿತ ಅಲ್ಲಿನ ಸಂಘ ಸಂಸ್ಥೆಯವರು ಒಟ್ಟಾಗಿ ಕುಟುಂಬವನ್ನು ಕರೆಸಿಕೊಂಡಿದ್ದಾರೆ.
ಆಸ್ಪತ್ರೆಯಲ್ಲಿ ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾಗುವ ನಂಬಿಕೆ ಹೊಂದಿದ್ದೇವೆ. ಎಷ್ಟೇ ಖರ್ಚಾದರೂ ನಾವು ಭರಿಸುತ್ತೇವೆ ಎಂದು ಅಲ್ಲಿನ ಸಂಘ ಸಂಸ್ಥೆಯವರು ಅಭಿಮಾನ ತೋರಿದ್ದಾರೆ ಎಂದು ಈಶ್ವರ್ ತಿಳಿಸಿದ್ದಾರೆ. ಉಡುಪಿ ಸಹಿತ ಕರಾವಳಿಯ ಸಂಘ ಸಂಸ್ಥೆಯವರು, ಸಾರ್ವಜನಿಕರು ಸಾಕಷ್ಟು ಸಹಕಾರ ನೀಡಿದ್ದಾರೆ. ಆದರೆ ಸರಕಾರದಿಂದ ಸಹಾಯ ದೊರೆತಿಲ್ಲ. ಮಕ್ಕಳ ಚಿಕಿತ್ಸೆಗಾಗಿ ಸದ್ಯಕ್ಕೆ ಕೇರಳದಲ್ಲಿದ್ದೇನೆ ಎಂದು ಈಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…