Featured

ಉಡುಪಿ:  ಈ ಬಾರಿಯ ಚುನಾವಣೆ ಹಿಂದುತ್ವ, ಅಭಿವೃದ್ಧಿ ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ನಡೆಯುತ್ತದೆ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ:  ಈ ಬಾರಿಯ ಚುನಾವಣೆಯು ಹಿಂದುತ್ವ, ಅಭಿವೃದ್ಧಿ ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ನಡೆಯುತ್ತದೆ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಲೋಕಸಭಾ ಚುನಾವಣೆಯು ರಾಷ್ಟ್ರೀಯತೆ, ರಾಷ್ಟ್ರದ ಭದ್ರತೆ ವಿಚಾರದಲ್ಲಿ ನಡೆಯುತ್ತದೆ. ಹಿಂದುತ್ವ ನಮ್ಮ ಪಕ್ಷದ ಅಜೆಂಡಾ ಹಾಗೂ ಅಭಿವೃದ್ಧಿಯೇ ನಮ್ಮ ಮಂತ್ರ. ಆದುದರಿಂದ ಈ ಬಾರಿಯ ಚುನಾವಣೆಯು ಹಿಂದುತ್ವ, ಅಭಿವೃದ್ಧಿ ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ನಡೆಯುತ್ತದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಕ್ಷವು ದಾಖಲೆ ಅಂತರದಲ್ಲಿ ಗೆಲುವು ಸಾಧಿಸಿ, ದೇಶದಲ್ಲಿ ಬಹುಮತ ಪಡೆಯಲಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1838 ಬೂತ್‌ಗಳಿವೆ. 445 ಶಕ್ತಿ ಕೇಂದ್ರಗಳು, 79 ನವ ಶಕ್ತಿ ಕೇಂದ್ರಗಳಿವೆ. ಸುಮಾರು 25-30 ಸಾವಿರ ತಳಮಟ್ಟದ ಕಾರ್ಯಕರ್ತರ ಪಡೆ ಇದೆ. ಶಾಸಕರು, ಮಾಜಿ ಶಾಸಕರು, ಮುಖಂಡರು ಒಟ್ಟಾಗಿ ಉಡುಪಿ -ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಂಘಟಿತವಾದ ಹೋರಾಟ ದಲ್ಲಿ ದಾಖಲೆ ಮತಗಳ ಅಂತರದಲ್ಲಿ ಗೆಲ್ಲಿಸಲು ಎಲ್ಲ ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿಯಲಿದ್ದಾರೆಂಬ ವಿಶ್ವಾಸ ಇದೆ ಎಂದರು.

ಜನಸಾಮಾನ್ಯರ ಮಧ್ಯೆ ಕೆಲಸ ಮಾಡಿರುವ ಅನುಭವ ನನ್ನಲ್ಲಿ ಇದೆ. ಗ್ರಾಪಂ, ತಾಪಂ, ಜಿಪಂ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾಗಿ, ಮೂರು ಬಾರಿ ಸಚಿವನಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ. ಜನ ಸಾಮಾನ್ಯರ ಸಮಸ್ಯೆಗಳನ್ನು ನಾನು ಅರ್ಥ ಮಾಡಿ ಕೊಂಡಿರುವುದರಿಂದ ಕೇಂದ್ರದಿಂದ ಬರುವ ಯೋಜನೆಗಳನ್ನು ರಾಜ್ಯ ಹಾಗೂ ಕ್ಷೇತ್ರಕ್ಕೆ ತರುವ ಕಾರಣಕ್ಕೆ ನನ್ನನ್ನು ಗೆಲ್ಲಿಸಲು ಮತದಾರರು ಆಶೀರ್ವಾದ ಮಾಡ ಬೇಕು ಎಂದು ಅವರು ಹೇಳಿದರು.

ಒಬ್ಬರಿಗೆ ಟಿಕೆಟ್ ಸಿಕ್ಕಿದ ಮೇಲೆ ಬಿಜೆಪಿಯೊಳಗೆ ಬೇಸರ, ಅಸಮಾಧಾನ, ಚರ್ಚೆ ಆಗುವುದಿಲ್ಲ. ಅಭ್ಯರ್ಥಿ ಎಂದು ಘೋಷಣೆ ಯಾದ ಮೇಲೆ ನನಗೆ ಎಲ್ಲಾ ನಾಯಕರು ಶುಭ ಕೋರಿದ್ದಾರೆ. ಸಿಟಿ ರವಿ, ಪ್ರಮೋದ್ ಮಧ್ವರಾಜ್, ಉದಯ ಕುಮಾರ್ ಶೆಟ್ಟಿ, ಶೋಭಾ ಕರಂದ್ಲಾಜೆ ಹಾರೈಸಿದ್ದಾರೆ. ಸಂಘಟನೆ, ನಾಯಕತ್ವ ಗಟ್ಟಿ ಇದ್ದರೆ ನಾವು ನಿಶ್ಚಿತವಾಗಿ ಗೆಲ್ಲುತ್ತೇವೆ ಎಂದರು.

ನಮ್ಮ ಸರಕಾರ ಇರುವಾಗ ಪಡಿತರದಲ್ಲಿ ಕುಚಲಕ್ಕಿ ಕೊಡುವ ಯೋಚನೆ ಮಾಡಿದ್ದೇವು. ಆದರೆ ನಮ್ಮ ಸರಕಾರ ಬದಲಾಗಿರುವುದರಿಂದ ಆ ಯೋಜನೆ ನಿಂತು ಬಿಟ್ಟಿದೆ. ನಮ್ಮ ಸರಕಾರ ಇಲ್ಲದೇ ಇರುವಾಗ ಅದನ್ನು ಮಾಡುವುದು ಸುಲಭ ಅಲ್ಲ. ಈಗಿನ ಸರಕಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಮುಂದೆ ನೋಡಬೇಕು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮುಖಂಡ ರಾದ ಮಟ್ಟಾರು ರತ್ನಾಕರ ಹೆಗ್ಡೆ, ರೇಶ್ಮಾ ಉದಯ ಶೆಟ್ಟಿ, ದಿನಕರ ಶೆಟ್ಟಿ, ವಿಜಯ ಕುಮಾರ್ ಉದ್ಯಾವರ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago