Featured

ಉಡುಪಿ: ಈ ಬಾರಿಯ ಪರ್ಯಾಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು : ಶಾಸಕ ರಘುಪತಿ ಭಟ್ – Vishwanews24 https://www.vishwanews24.com/?p=53630

ಉಡುಪಿ: ಈ ಬಾರಿಯ ಪರ್ಯಾಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು : ಶಾಸಕ ರಘುಪತಿ ಭಟ್ – Vishwanews24

ಉಡುಪಿ: ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಪರ್ಯಾಯೋತ್ಸವಕ್ಕೆ ಇಂದಿನಿಂದ ಸಿದ್ದತೆಗಳು ಆರಂಭವಾಗಲಿದ್ದು, ಈ ಬಾರಿಯ ಪರ್ಯಾಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಪರ್ಯಾಯೋತ್ಸವ ದರ್ಬಾರ್ ಜನವರಿ 18 ಮಂಗಳವಾರ ಬೆಳಿಗ್ಗೆ ಸರಳವಾಗಿ ನಡೆಸಲು ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ ಸಮಿತಿಯ ಪ್ರಮುಖ ಮುಖಂಡರ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಎರಡು ದಿನಗಳು ನಡೆಯುವ ಪರ್ಯಾಯೋತ್ಸವ ನಿಮಿತ್ತ ಜಿಲ್ಲಾಡಳಿತ ಹಾಗೂ ಸಮಿತಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದ್ದು, ಪರ್ಯಾಯ ಪೀಠ ಅಲಂಕರಿಸಲಿರುವ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಈಗಾಗಲೇ ಸಾಂಪ್ರದಾಯಿಕವಾಗಿ ತೀರ ಸರಳ ರೀತಿಯಲ್ಲಿ ಪರ್ಯಾಯೋತ್ಸವ ನಡೆಯಲಿದ್ದು, ಇದಕ್ಕೆ ಸಹಕರಿಸುವಂತೆ ನಾಗರಿಕರು, ಭಕ್ತರಲ್ಲಿ ಮನವಿ ಮಾಡಿದ್ದಾರೆ.

ಸಾಂಪ್ರದಾಯಿಕ ಆಚರಣೆಗೆ ಹೆಚ್ಚು ಒತ್ತು ನೀಡಿ ಸರಳವಾಗಿಯೇ ಪರ್ಯಾಯೋತ್ಸವ ನಡೆಯಲಿದೆ. ಜ.17ರ ರಾತ್ರಿ 9 ಗಂಟೆ ಅನಂತರ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago