Featured

ಉಡುಪಿ: ಈ ಬಾರಿ ಜನರ ಬಳಿಗೆ ತೆರಳಿ ಹಣ ಸಂಗ್ರಹ ಮಾಡುವುದಿಲ್ಲ : ರವಿ ಕಟಪಾಡಿ – Vishwanews24

ಉಡುಪಿ: ಕೃಷ್ಣಜನ್ಮಾಷ್ಟಮಿ ಈ ಬಾರಿ ಕೂಡಾ ವಿಶಿಷ್ಟ ವೇಷದೊಂದಿಗೆ ಜನರನ್ನು ಮನರಂಜಿಸಲು ತಯಾರಾಗಿದ್ದಾರೆ ರವಿ ಕಟಪಾಡಿ

ಉಡುಪಿ: ಕೃಷ್ಣಜನ್ಮಾಷ್ಟಮಿ ತಯಾರಿಗಳು ಕೃಷ್ಣ ನಗರಿ ಉಡುಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ ಕೂಡಾ ಈ ಬಾರಿ ವಿಶಿಷ್ಟ ವೇಷದೊಂದಿಗೆ ಜನರ ಮನರಂಜಿಸಲು ತಯಾರಾಗಿದ್ದರೆ.

ಈ ಬಾರಿ ರವಿ ಕಟಪಾಡಿ ಅವರು ಸೀ ಪೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಧರಿಸಲಿದ್ದು, ಉದ್ಯಾವರ, ಉಡುಪಿ,ಮಲ್ಪೆ, ಪಡುಕೆರೆ ಮತ್ತು ಇತರ ಪ್ರದೇಶಗಳಲ್ಲಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ತಿರುಗಾಟ ನಡೆಸಿ ಜನರನ್ನು ರಂಜಿಸಲಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಕುಂದಾಪುರ ಮೂಲದ ೨ ವರ್ಷದ ಮಗುವಿನ ಚಿಕಿತ್ಸೆಗೆ ಹಣವನ್ನು ನೀಡಲು ರವಿ ಕಟಪಾಡಿ ನಿರ್ಧಾರ ಮಾಡಿದ್ದು, ಆದರೆ ಈ ಬಾರಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ಜನರ ಬಳಿಗೆ ಹೋಗಿ ಬಾಕ್ಸ್ ಗಳನ್ನು ಹಿಡಿದು ಹಣವನ್ನು ಸಂಗ್ರಹ ಮಾಡದೇ ಇರಲು ನಿರ್ಧರಿಸಿದೆ.

ಈ ಕುರಿತು ಉಡುಪಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ‌ ನೀಡಿದ ರವಿ ಕಟಪಾಡಿ ಅವರು “ಕಳೆದ ೮ ವರ್ಷಗಳಿಂದ ಸುಮಾರು 113 ಮಕ್ಕಳಿಗೆ ಸುಮಾರು 1ಕೋಟಿಗೂ ಮಿಕ್ಕಿ ಧನಸಹಾಯ ಮಾಡಿದ್ದು, ಇದರ ಸಂತೃಪ್ತಿ ನಮಗಿದೆ. ಆದರೆ 47 ವರ್ಷದ ಬಳಿಕ ಈ ಬಾರಿ ನಾನು ನನ್ನ ಸ್ವಂತ ಮನೆ ಕಟ್ಟುವ ಕಾರ್ಯವನ್ನು ಪ್ರಾರಂಭ ಮಾಡಿದ್ದೇನೆ, ಆದರೆ ನನ್ನದೇ ಊರಿನ ಕೆಲವೊಂದು ಜನರು ನಾನು ವೇಷ ಹಾಕಿ ಬಂದ ಹಣದಲ್ಲಿ 1 ಕೋಟಿ ಮೌಲ್ಯದ ಮನೆ ನಿರ್ಮಾಣ ಮಾಡುತ್ತಿದ್ದೇನೆ ಎಂದು ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಹೀಗಾಗಿ ಈ ಬಾರಿ ವೇಷ ಹಾಕಿದರೂ ಕೂಡಾ ಜನರ ಬಳಿಗೆ ತೆರಳಿ ಬಾಕ್ಸ್ ನಲ್ಲಿ ಹಣ ಸಂಗ್ರಹ ಮಾಡುವುದಿಲ್ಲ. ಬದಲಾಗಿ ಯಾರಿಗಾದರೂ ನಮ್ಮ ಉದ್ದೇಶಕ್ಕೆ ಸಹಕಾರ ನೀಡಲು ಇಚ್ಛಿಸಿದ್ದಲ್ಲಿ ನಮ್ಮ ವಾಹನದ ಬಳಿಗೆ ಬಂದು ತಮ್ಮ ಧನಸಹಾಯವನ್ನು ನೀಡಬಹುದು. ಇದು ನಮ್ಮ ರವಿ ಫ್ರೆಂಡ್ಸ್ ಕಟಪಾಡಿ ತಂಡದ ನಿರ್ಧಾರ” ಎಂದರು.

ಈ ಸಂದರ್ಭದಲ್ಲಿ ತಂಡದ ಮಾರ್ಗದರ್ಶಕರಾದ ಮಹೇಶ್ ಶೆಣೈ, ಮೊಹಮ್ಮದ್ ರಮೀಜುಲ್ಲಾ, ವಿಶ್ವಾಸ್ ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

24 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

55 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago