Featured

ಉಡುಪಿ: ಈ ಬಾರಿ ಜನರ ಬಳಿಗೆ ತೆರಳಿ ಹಣ ಸಂಗ್ರಹ ಮಾಡುವುದಿಲ್ಲ : ರವಿ ಕಟಪಾಡಿ – Vishwanews24

ಉಡುಪಿ: ಕೃಷ್ಣಜನ್ಮಾಷ್ಟಮಿ ಈ ಬಾರಿ ಕೂಡಾ ವಿಶಿಷ್ಟ ವೇಷದೊಂದಿಗೆ ಜನರನ್ನು ಮನರಂಜಿಸಲು ತಯಾರಾಗಿದ್ದಾರೆ ರವಿ ಕಟಪಾಡಿ

ಉಡುಪಿ: ಕೃಷ್ಣಜನ್ಮಾಷ್ಟಮಿ ತಯಾರಿಗಳು ಕೃಷ್ಣ ನಗರಿ ಉಡುಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ ಕೂಡಾ ಈ ಬಾರಿ ವಿಶಿಷ್ಟ ವೇಷದೊಂದಿಗೆ ಜನರ ಮನರಂಜಿಸಲು ತಯಾರಾಗಿದ್ದರೆ.

ಈ ಬಾರಿ ರವಿ ಕಟಪಾಡಿ ಅವರು ಸೀ ಪೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಧರಿಸಲಿದ್ದು, ಉದ್ಯಾವರ, ಉಡುಪಿ,ಮಲ್ಪೆ, ಪಡುಕೆರೆ ಮತ್ತು ಇತರ ಪ್ರದೇಶಗಳಲ್ಲಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ತಿರುಗಾಟ ನಡೆಸಿ ಜನರನ್ನು ರಂಜಿಸಲಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಕುಂದಾಪುರ ಮೂಲದ ೨ ವರ್ಷದ ಮಗುವಿನ ಚಿಕಿತ್ಸೆಗೆ ಹಣವನ್ನು ನೀಡಲು ರವಿ ಕಟಪಾಡಿ ನಿರ್ಧಾರ ಮಾಡಿದ್ದು, ಆದರೆ ಈ ಬಾರಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ಜನರ ಬಳಿಗೆ ಹೋಗಿ ಬಾಕ್ಸ್ ಗಳನ್ನು ಹಿಡಿದು ಹಣವನ್ನು ಸಂಗ್ರಹ ಮಾಡದೇ ಇರಲು ನಿರ್ಧರಿಸಿದೆ.

ಈ ಕುರಿತು ಉಡುಪಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ‌ ನೀಡಿದ ರವಿ ಕಟಪಾಡಿ ಅವರು “ಕಳೆದ ೮ ವರ್ಷಗಳಿಂದ ಸುಮಾರು 113 ಮಕ್ಕಳಿಗೆ ಸುಮಾರು 1ಕೋಟಿಗೂ ಮಿಕ್ಕಿ ಧನಸಹಾಯ ಮಾಡಿದ್ದು, ಇದರ ಸಂತೃಪ್ತಿ ನಮಗಿದೆ. ಆದರೆ 47 ವರ್ಷದ ಬಳಿಕ ಈ ಬಾರಿ ನಾನು ನನ್ನ ಸ್ವಂತ ಮನೆ ಕಟ್ಟುವ ಕಾರ್ಯವನ್ನು ಪ್ರಾರಂಭ ಮಾಡಿದ್ದೇನೆ, ಆದರೆ ನನ್ನದೇ ಊರಿನ ಕೆಲವೊಂದು ಜನರು ನಾನು ವೇಷ ಹಾಕಿ ಬಂದ ಹಣದಲ್ಲಿ 1 ಕೋಟಿ ಮೌಲ್ಯದ ಮನೆ ನಿರ್ಮಾಣ ಮಾಡುತ್ತಿದ್ದೇನೆ ಎಂದು ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಹೀಗಾಗಿ ಈ ಬಾರಿ ವೇಷ ಹಾಕಿದರೂ ಕೂಡಾ ಜನರ ಬಳಿಗೆ ತೆರಳಿ ಬಾಕ್ಸ್ ನಲ್ಲಿ ಹಣ ಸಂಗ್ರಹ ಮಾಡುವುದಿಲ್ಲ. ಬದಲಾಗಿ ಯಾರಿಗಾದರೂ ನಮ್ಮ ಉದ್ದೇಶಕ್ಕೆ ಸಹಕಾರ ನೀಡಲು ಇಚ್ಛಿಸಿದ್ದಲ್ಲಿ ನಮ್ಮ ವಾಹನದ ಬಳಿಗೆ ಬಂದು ತಮ್ಮ ಧನಸಹಾಯವನ್ನು ನೀಡಬಹುದು. ಇದು ನಮ್ಮ ರವಿ ಫ್ರೆಂಡ್ಸ್ ಕಟಪಾಡಿ ತಂಡದ ನಿರ್ಧಾರ” ಎಂದರು.

ಈ ಸಂದರ್ಭದಲ್ಲಿ ತಂಡದ ಮಾರ್ಗದರ್ಶಕರಾದ ಮಹೇಶ್ ಶೆಣೈ, ಮೊಹಮ್ಮದ್ ರಮೀಜುಲ್ಲಾ, ವಿಶ್ವಾಸ್ ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

32 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

42 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

1 hour ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 hour ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago