Featured

ಉಡುಪಿ: ಈ ಬಾರಿ ಜನರ ಬಳಿಗೆ ತೆರಳಿ ಹಣ ಸಂಗ್ರಹ ಮಾಡುವುದಿಲ್ಲ : ರವಿ ಕಟಪಾಡಿ – Vishwanews24

ಉಡುಪಿ: ಕೃಷ್ಣಜನ್ಮಾಷ್ಟಮಿ ಈ ಬಾರಿ ಕೂಡಾ ವಿಶಿಷ್ಟ ವೇಷದೊಂದಿಗೆ ಜನರನ್ನು ಮನರಂಜಿಸಲು ತಯಾರಾಗಿದ್ದಾರೆ ರವಿ ಕಟಪಾಡಿ

ಉಡುಪಿ: ಕೃಷ್ಣಜನ್ಮಾಷ್ಟಮಿ ತಯಾರಿಗಳು ಕೃಷ್ಣ ನಗರಿ ಉಡುಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ ಕೂಡಾ ಈ ಬಾರಿ ವಿಶಿಷ್ಟ ವೇಷದೊಂದಿಗೆ ಜನರ ಮನರಂಜಿಸಲು ತಯಾರಾಗಿದ್ದರೆ.

ಈ ಬಾರಿ ರವಿ ಕಟಪಾಡಿ ಅವರು ಸೀ ಪೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಧರಿಸಲಿದ್ದು, ಉದ್ಯಾವರ, ಉಡುಪಿ,ಮಲ್ಪೆ, ಪಡುಕೆರೆ ಮತ್ತು ಇತರ ಪ್ರದೇಶಗಳಲ್ಲಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ತಿರುಗಾಟ ನಡೆಸಿ ಜನರನ್ನು ರಂಜಿಸಲಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಕುಂದಾಪುರ ಮೂಲದ ೨ ವರ್ಷದ ಮಗುವಿನ ಚಿಕಿತ್ಸೆಗೆ ಹಣವನ್ನು ನೀಡಲು ರವಿ ಕಟಪಾಡಿ ನಿರ್ಧಾರ ಮಾಡಿದ್ದು, ಆದರೆ ಈ ಬಾರಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ಜನರ ಬಳಿಗೆ ಹೋಗಿ ಬಾಕ್ಸ್ ಗಳನ್ನು ಹಿಡಿದು ಹಣವನ್ನು ಸಂಗ್ರಹ ಮಾಡದೇ ಇರಲು ನಿರ್ಧರಿಸಿದೆ.

ಈ ಕುರಿತು ಉಡುಪಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ‌ ನೀಡಿದ ರವಿ ಕಟಪಾಡಿ ಅವರು “ಕಳೆದ ೮ ವರ್ಷಗಳಿಂದ ಸುಮಾರು 113 ಮಕ್ಕಳಿಗೆ ಸುಮಾರು 1ಕೋಟಿಗೂ ಮಿಕ್ಕಿ ಧನಸಹಾಯ ಮಾಡಿದ್ದು, ಇದರ ಸಂತೃಪ್ತಿ ನಮಗಿದೆ. ಆದರೆ 47 ವರ್ಷದ ಬಳಿಕ ಈ ಬಾರಿ ನಾನು ನನ್ನ ಸ್ವಂತ ಮನೆ ಕಟ್ಟುವ ಕಾರ್ಯವನ್ನು ಪ್ರಾರಂಭ ಮಾಡಿದ್ದೇನೆ, ಆದರೆ ನನ್ನದೇ ಊರಿನ ಕೆಲವೊಂದು ಜನರು ನಾನು ವೇಷ ಹಾಕಿ ಬಂದ ಹಣದಲ್ಲಿ 1 ಕೋಟಿ ಮೌಲ್ಯದ ಮನೆ ನಿರ್ಮಾಣ ಮಾಡುತ್ತಿದ್ದೇನೆ ಎಂದು ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಹೀಗಾಗಿ ಈ ಬಾರಿ ವೇಷ ಹಾಕಿದರೂ ಕೂಡಾ ಜನರ ಬಳಿಗೆ ತೆರಳಿ ಬಾಕ್ಸ್ ನಲ್ಲಿ ಹಣ ಸಂಗ್ರಹ ಮಾಡುವುದಿಲ್ಲ. ಬದಲಾಗಿ ಯಾರಿಗಾದರೂ ನಮ್ಮ ಉದ್ದೇಶಕ್ಕೆ ಸಹಕಾರ ನೀಡಲು ಇಚ್ಛಿಸಿದ್ದಲ್ಲಿ ನಮ್ಮ ವಾಹನದ ಬಳಿಗೆ ಬಂದು ತಮ್ಮ ಧನಸಹಾಯವನ್ನು ನೀಡಬಹುದು. ಇದು ನಮ್ಮ ರವಿ ಫ್ರೆಂಡ್ಸ್ ಕಟಪಾಡಿ ತಂಡದ ನಿರ್ಧಾರ” ಎಂದರು.

ಈ ಸಂದರ್ಭದಲ್ಲಿ ತಂಡದ ಮಾರ್ಗದರ್ಶಕರಾದ ಮಹೇಶ್ ಶೆಣೈ, ಮೊಹಮ್ಮದ್ ರಮೀಜುಲ್ಲಾ, ವಿಶ್ವಾಸ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

33 minutes ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

52 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

1 hour ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

1 hour ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

1 hour ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

1 hour ago