Featured

ಉಡುಪಿ : ಈ ಬಾರಿ ಸೀ ಫೋಕ್ (Sea Folk) ಮತ್ತೊಂದು ವಿಭಿನ್ನ ವೇಷದಲ್ಲಿ ರವಿ ಕಟಪಾಡಿ – Vishwanews24

ಉಡುಪಿ : ಈ ಬಾರಿ ಸೀ ಫೋಕ್ (Sea Folk) ಮತ್ತೊಂದು ವಿಭಿನ್ನ ವೇಷದಲ್ಲಿ ರವಿ ಕಟಪಾಡಿ

ಉಡುಪಿ:  ಜಿಲ್ಲೆಯ ಕಾಪು ತಾಲೂಕಿನ ರವಿ ಕಟಪಾಡಿ ಅವರು ಪ್ರತಿ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆ  ವಿಭಿನ್ನ ವೇಷಗಳನ್ನು ತೊಡುತ್ತಾರೆ. ಕಳೆದ ಏಳು ವರ್ಷಗಳಿಂದ ನಿರಂತರವಾಗಿ ವಿಭಿನ್ನ ವೇಷಭೂಷಣ ತೊಟ್ಟು ಅಷ್ಟಮಿ ಮತ್ತು ವಿಟ್ಲಪಿಂಡಿ ಮಹೋತ್ಸ ದಿನ ಒಂದು ಉದ್ದೇಶ ಇಟ್ಟುಕೊಂಡು ಜನರ ಮಧ್ಯೆ ಹೋಗುತ್ತಾರೆ. ರವಿ ಹಾಕುವ ವೇಷ ಸ್ವಂತಕ್ಕಲ್ಲ, ಪರರ ಹಿತಕ್ಕಾಗಿ ಹಾಗೂ ಕಷ್ಟದ ಪರಿಹಾರಕ್ಕಾಗಿ ಆಗಿರುತ್ತದೆ.

ರವಿ ಈವರೆಗೆ ಏಳು ವಿಭಿನ್ನ ವೇಷಗಳನ್ನು ತೊಟ್ಟಿದ್ದು ಒಂದು ಕೋಟಿ ಹದಿಮೂರು ಲಕ್ಷ 70 ಸಾವಿರ ರುಪಾಯಿ ಜನರಿಂದ ಸಂಗ್ರಹಿಸಿದ್ದಾರೆ. ಒಂದು ರೂಪಾಯಿ ಸ್ವಂತ ಖರ್ಚಿಗೆ ಇಟ್ಟುಕೊಳ್ಳದ ರವಿ, ಎಲ್ಲವನ್ನೂ 113 ಅನಾರೋಗ್ಯ ಪೀಡಿತ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಈ ಬಾರಿ ಮತ್ತೊಂದು ವಿಭಿನ್ನ ವೇಷದ ಮುಂದೆ ಪ್ರತ್ಯಕ್ಷ ಆಗಲಿದ್ದಾರೆ.

ಸಮಾಜ ಸೇವೆ ಮಾಡಿ ನೊಂದವರ ಮುಖದಲ್ಲಿ ನಗು ಮೂಡಿಸಿದ ರವಿ ಮನಸ್ಸಿಗೆ ಈ ಬಾರಿ ನೋವಾಗಿದೆ. ವೇಷ ಹಾಕಿ ಸಂಗ್ರಹಿಸಿದ ಹಣದಿಂದ ಕೋಟಿ ರೂಪಾಯಿಯ ಮನೆ ಕಟ್ಟಿಸಿಕೊಳ್ಳುತ್ತಿದ್ದಾನೆ ಎಂದು ಕೆಲವರು ಕುಹಕವಾಡಿದ್ದಾರೆ. ಈ ಬಾರಿ ನಾನು ವೇಷ ಹಾಕುವುದಿಲ್ಲ ಎಂದು ರವಿ ನಿರ್ಧರಿಸಿದ್ದರು. ರವಿ ಫ್ರೆಂಡ್ಸ್ ಮೀಟಿಂಗ್ ಮಾಡಿ ಊರ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮ ಕೆಲಸ ನಾವು ಮಾಡೋಣ ಎಂದು ಈ ಬಾರಿಯೂ ವೇಷ ಹಾಕಲು ನಿರ್ಧರಿಸಿದ್ದಾರೆ.

ನಮ್ಮ ಪಬ್ಲಿಕ್ ಹೀರೋ ರವಿ ಕಟಪಾಡಿ ಈ ಬಾರಿ ಸೀ ಫೋಕ್ (Sea Folk) ಎಂಬ ಹಾಲಿವುಡ್ ಮೂವಿಯ ಒಂದು ಫಿಕ್ಷನ್ ಪಾತ್ರವನ್ನು ಹೋಲುವ ವೇಷ ಹಾಕಲಿದ್ದಾರೆ. ಕುಂದಾಪುರ ಮೂಲದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎರಡು ವರ್ಷದ ಮಗುವಿಗೆ ರವಿ ಸಹಾಯ ಮಾಡುವ ಮಾತು ನೀಡಿದ್ದಾರೆ. ಚಿಕಿತ್ಸೆಗೆ 15 ಲಕ್ಷ ರೂಪಾಯಿ ಬೇಕಾಗಿದ್ದು, ರವಿ ತನ್ನ ಕೈಲಾದ ಸಹಾಯ ಮಾಡಲಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago