ಉಡುಪಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡುವ ಮೂಲಕ ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಮಾಡಿದ್ದಾರೆ, ಅವರು ತಕ್ಷಣ ಸಮಸ್ತ ಹಿಂದೂ ಸಮಾಜ ಕ್ಷಮೆ ಕೇಳಬೇಕು ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ ಆಗ್ರಹಿಸಿದ್ದಾರೆ.
ಅರ್ಹತೆ ಇಲ್ಲದಿದ್ದರೂ ಸಂದರ್ಭದ ಅನಿವಾರ್ಯತೆಯಿಂದ ರಾಜ್ಯದ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ಬಿಜೆಪಿಯನ್ನು ಬೆಂಬಲಿಸುವ ಹಿಂದೂ ಸಮಾಜವನ್ನು ಒಡೆದು, ಅತಂತ್ರ ವಿಧಾನಸಭೆಯನ್ನು ಸೃಷ್ಟಿಸಿ ಮತ್ತೇ ತಾವು ಮುಖ್ಯಮಂತ್ರಿಯಾಗುವ ತಂತ್ರ ಹೆಣೆಯುತ್ತಿದ್ದಾರೆ. ಆದರೇ ಈ ಬಾರಿ ಹಿಂದೂ ಸಮಾಜ ಕಾಂಗ್ರೆಸ್ ಜೊತೆ ಜೆಡಿಎಸ್ ಪಕ್ಷವನ್ನೂ ನಿರ್ನಾಮ ಮಾಡಲಿದೆ. ಕುಮಾರಸ್ವಾಮಿ ಮುಂದೆಂದೂ ಈ ರಾಜ್ಯದ ಮುಖ್ಯಮಂತ್ರಿಯಾಗಲಾರರು ಎಂದವರು ಹೇಳಿದ್ದಾರೆ.
ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಪ್ರಹ್ಲಾದ್ ಜೋಷಿ ಅವರನ್ನು ಅವಮಾನಿಸಿರುವ ಕುಮಾರಸ್ವಾಮಿ ಅವರ ಜಾತ್ಯಾತೀತ ಮುಖವಾಡ ಕಳಚಿಬಿದ್ದಿದೆ. ಜೋಷಿ ಅವರು ಪಕ್ಷನಿಷ್ಠೆ ದೇಶನಿಷ್ಠೆಯಿಂದ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಅವರು ಅರ್ಹವಾಗಿಯೇ ರಾಜ್ಯದ ಮುಖ್ಯಮಂತ್ರಿಯಾದರೇ ಅದನ್ನು ತಡೆಯುವುದಕ್ಕೆ ಕುಮಾರಸ್ವಾಮಿಯಂತಹವರಿಂದ ಸಾಧ್ಯವಿಲ್ಲ.
ಕುಮಾರಸ್ವಾಮಿ ಅವರು ರಾಜಕೀಯದಲ್ಲಿ ಉಳಿಯುವ ಆಸೆ ಇದ್ದರೇ ತಕ್ಷಣ ಬ್ರಾಹ್ಮಣ ಸಮುದಾಯವೂ ಸೇರಿದಂತೆ ಹಿಂದೂ ಸಮಾಜದ ಕ್ಷಮೆ ಕೇಳಬೇಕು, ಇಲ್ಲದಿದ್ದಲ್ಲಿ ಮುಂಬರುವ ಚುನಾವಣೆಯ ನಂತರ ಅನಿವಾರ್ಯವಾಗಿ ರಾಜಕೀಯದಿಂದ ನಿವೃತ್ತಿಯಾಗುವುದಕ್ಕೆ ಸಿದ್ಧರಾಬೇಕು ಎಂದು ಶ್ರೀಶ ನಾಯಕ್ ಎಚ್ಚರಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…