ಉಡುಪಿ, : ಈ ಸಾಲಿನ ರಾಷ್ಟ್ರಪತಿ ವಿಶಿಷ್ಟ ಪೊಲೀಸ್ ಸೇವಾ ಪದಕಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ಕ್ರೈಮ್ ರೆಕಾರ್ಡ್ ಬ್ಯುರೋದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬ್ರಹ್ಮಾವರ ಆಯ್ಕೆಯಾಗಿದ್ದಾರೆ.
1993ರಲ್ಲಿ ಪೊಲೀಸ್ ಇಲಾಖೆಗೆ ಕಾನ್ಸ್ಟೇಬಲ್ ಆಗಿ ಸೇರ್ಪಡೆಗೊಂಡ ಪ್ರಕಾಶ್, ಅವಿಭಜಿತ ದ.ಕ. ಜಿಲ್ಲೆಯ ವೇಣೂರು, ಉಡುಪಿ ಸಂಚಾರ, ಡಿಸಿಆರ್ಬಿ, ಮಣಿಪಾಲ, ಕಾಪು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2009ರಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಮತ್ತು 2017ರಲ್ಲಿ ಎಎಸ್ಸೈ ಆಗಿ ಅವರು ಭಡ್ತಿ ಹೊಂದಿದರು. ಕಳೆದ 2018ರಿಂದ ಇವರು ಜಿಲ್ಲಾ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ನಾಳಿನ ಟ್ರ್ಯಾಕ್ಟರ್ ರ್ಯಾಲಿ ಪ್ರತಿಭಟನೆಗೆ ಅವಕಾಶವಿಲ್ಲ : ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟನೆ -Vishwanews24
ಇವರು 2005ರಲ್ಲಿ ಹೈದರಬಾದ್ ನಲ್ಲಿ ಮತ್ತು 2009ರಲ್ಲಿ ಬೆಂಗಳೂರಿನಲ್ಲಿ ನಡೆದ ಆಲ್ ಇಂಡಿಯಾ ಪೊಲೀಸ್ ಡ್ಯುಟಿ ಮೀಟ್ನ ಸ್ಪರ್ಧೆಯಲ್ಲಿ ತಲಾ ಒಂದು ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ. ಗಂಗೊಳ್ಳಿ, ಮಣಿಪಾಲ, ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲವು ಪ್ರಕರಣಗಳನ್ನು ಭೇದಿಸುವಲ್ಲಿ ಇವರು ಸಹಕಾರ ನೀಡಿದ್ದರು. ಇವೆಲ್ಲವನ್ನು ಗುರುತಿಸಿ ಇವರನ್ನು ರಾಷ್ಟ್ರಪತಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…