Featured

ಉಡುಪಿ ಉಚ್ಚಿಲ ದಸರಾ :ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ ಸಾಂಸ್ಕೃತಿಕ ಕಾರ್ಯಕ್ರಮ – vishwanews24

ಉಡುಪಿ ಉಚ್ಚಿಲ ದಸರಾ :ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ ಸಾಂಸ್ಕೃತಿಕ ಕಾರ್ಯಕ್ರಮ

ಕಾಪು: ಉಡುಪಿ ಉಚ್ಚಿಲ ದಸರಾ 2024ರಲ್ಲಿ ಲಲಿತಾ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಜಿ. ಶಂಕರ್‌ ತೆರೆದ ಸಭಾಂಗಣದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ಮುಂಭಾಗದಲ್ಲಿ 3 ನೇ ವರ್ಷದ “ಶತವೀಣಾವಲ್ಲರಿ’ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಪ್ರಸಿದ್ಧ ವೀಣಾವಾದಕಿ ವಿದುಷಿ ಪವನ ಬಿ. ಆಚಾರ್‌ ಮಣಿಪಾಲ ನಿರ್ದೇಶನ ಮತ್ತು ನಿರ್ವಹಣೆಯೊಂದಿಗೆ ಕರಾವಳಿಯ 108 ಮಂದಿ ವೀಣಾವಾದಕರು ಮತ್ತು ಸಹ ಕಲಾವಿದರ ಸಹಭಾಗಿತ್ವದೊಂದಿಗೆ ಶತವೀಣಾವಲ್ಲರಿ ಜರಗಿತು. ವಿದುಷಿ ಪವನ ಬಿ. ಆಚಾರ್‌ ಅವರನ್ನು ಡಾ| ಜಿ. ಶಂಕರ್‌ ಅವರು ಸಮ್ಮಾನಿಸಿ, ಗೌರವಿಸಿದರು.

ಸುಮಂಗಲೆಯರಿಗೆ ಗೌರವಾರ್ಪಣೆ

ಸೋಮವಾರ ಚಂಡಿಕಾ ಹೋಮ, ಭಜನೆ, ಅಂಬಿಕಾ ಕಲ್ಪೋಕ್ತ ಪೂಜೆ, ಧಾರ್ಮಿಕ ಸಭೆ ಸಹಿತ ವಿವಿಧ ಕಾರ್ಯಕ್ರಮಗಳು ಜರಗಿದವು. ಲಲಿತಾ ಪಂಚಮಿ ಪ್ರಯುಕ್ತ ಸಾವಿರಾರು ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಜರಗಿತು.

ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯ, ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಕ್ಷೇತ್ರಾಡಳಿತ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಗುಂಡು ಬಿ. ಅಮೀನ್‌, ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಶರಣ್‌ ಮಟ್ಟು, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾ ರಾಣಿ, ಕಾಪು ನಾಲ್ಕುಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಮನೋಜ್‌ ಕಾಂಚನ್‌, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ ಮೊದಲಾದವರಿದ್ದರು. ಸಾಂಸ‌¢ತಿಕ ಕಾರ್ಯಕ್ರಮ ಸಮಿತಿ ಸಂಚಾಲಕ ಸತೀಶ್‌ ಅಮೀನ್‌ ಪಡುಕೆರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago