ಕಾಪು: ಉಡುಪಿ ಉಚ್ಚಿಲ ದಸರಾ 2024ರಲ್ಲಿ ಲಲಿತಾ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ಮುಂಭಾಗದಲ್ಲಿ 3 ನೇ ವರ್ಷದ “ಶತವೀಣಾವಲ್ಲರಿ’ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
ಪ್ರಸಿದ್ಧ ವೀಣಾವಾದಕಿ ವಿದುಷಿ ಪವನ ಬಿ. ಆಚಾರ್ ಮಣಿಪಾಲ ನಿರ್ದೇಶನ ಮತ್ತು ನಿರ್ವಹಣೆಯೊಂದಿಗೆ ಕರಾವಳಿಯ 108 ಮಂದಿ ವೀಣಾವಾದಕರು ಮತ್ತು ಸಹ ಕಲಾವಿದರ ಸಹಭಾಗಿತ್ವದೊಂದಿಗೆ ಶತವೀಣಾವಲ್ಲರಿ ಜರಗಿತು. ವಿದುಷಿ ಪವನ ಬಿ. ಆಚಾರ್ ಅವರನ್ನು ಡಾ| ಜಿ. ಶಂಕರ್ ಅವರು ಸಮ್ಮಾನಿಸಿ, ಗೌರವಿಸಿದರು.
ಸುಮಂಗಲೆಯರಿಗೆ ಗೌರವಾರ್ಪಣೆ
ಸೋಮವಾರ ಚಂಡಿಕಾ ಹೋಮ, ಭಜನೆ, ಅಂಬಿಕಾ ಕಲ್ಪೋಕ್ತ ಪೂಜೆ, ಧಾರ್ಮಿಕ ಸಭೆ ಸಹಿತ ವಿವಿಧ ಕಾರ್ಯಕ್ರಮಗಳು ಜರಗಿದವು. ಲಲಿತಾ ಪಂಚಮಿ ಪ್ರಯುಕ್ತ ಸಾವಿರಾರು ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಜರಗಿತು.
ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯ, ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಕ್ಷೇತ್ರಾಡಳಿತ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಗುಂಡು ಬಿ. ಅಮೀನ್, ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಶರಣ್ ಮಟ್ಟು, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾ ರಾಣಿ, ಕಾಪು ನಾಲ್ಕುಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಮನೋಜ್ ಕಾಂಚನ್, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ ಮೊದಲಾದವರಿದ್ದರು. ಸಾಂಸ¢ತಿಕ ಕಾರ್ಯಕ್ರಮ ಸಮಿತಿ ಸಂಚಾಲಕ ಸತೀಶ್ ಅಮೀನ್ ಪಡುಕೆರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…