ಕಾಪು, : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತಾಭಿಮಾನಿಗಳು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ 3ರಿಂದ ಅ.12ರ ವರೆಗೆ ಜರಗಲಿರುವ ಮೂರನೇ ವರ್ಷದ ಉಡುಪಿ ಉಚ್ಚಿಲ ದಸರಾ 2024ರ ಅಂಗವಾಗಿ ಶಾಲಿನಿ ಡಾ| ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಪ್ರತಿದಿನ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿವಿಧ ಗಣ್ಯರಿಂದ ಧಾರ್ಮಿಕ ಉಪನ್ಯಾಸ ಮತ್ತು ಪ್ರವಚನ ನಡೆಯಲಿದೆ.
ಪ್ರತೀ ದಿನ ಪೂರ್ವಾಹ್ನ ಉದಯ ಪೂಜೆ, 9 ಗಂಟೆಗೆ ನಿತ್ಯ ಚಂಡಿಕಾಹೋಮ, 12 ಗಂಟೆಗೆ ನವದುರ್ಗೆಯರು ಮತ್ತು ಶಾರದಾ ಮಾತೆಗೆ ಮಹಾಮಂಗಳಾರತಿ, 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಭಜನ ಕಾರ್ಯಕ್ರಮ, ಸಂಜೆ 5.45ರಿಂದ 6.15ರ ವರೆಗೆ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ,
6.3000 ಉಪಾಹಾರ ವಿತರಣೆ, ರಾತ್ರಿ 7.30ಕ್ಕೆ ನವದುರ್ಗೆಯರು ಮತ್ತು ಶಾರದಾ ಮಾತೆಗೆ ಮಹಾಪೂಜೆ, 8 ರಿಂದ 8.10ರ ವರೆಗೆ ನವದುರ್ಗೆಯರ ಕುರಿತಾದ ಲೇಸರ್ ಶೋ, 8.30ಕ್ಕೆ ಕಲೋಕ್ತ ಪೂಜೆ ನಡೆಯಲಿದೆ.
ಧಾರ್ಮಿಕ ಸಭೆಯಲ್ಲಿ ಅ. 3ರಂದು ಪ್ರೀತಿ ರೇಖಾ ಬ್ರಹ್ಮಾವರ ಅವರು ಆಧ್ಯಾತ್ಮ ಭಾರತ, 4ರಂದು ಅರ್ಪಿತಾ ಶೆಟ್ಟಿ ಕಟಪಾಡಿ ಅವರು ಯಂತ್ರ ನಾರ್ಯಸ್ತು ಪೂಜ್ಯಂತೇ, ಅ. 5ರಂದು ನಾಗಶ್ರೀ ತ್ಯಾಗರಾಜ ಎನ್. ಅವರು ಮಾತೃದೇವೋಭವ, ಅ. 6ರಂದು ಎನ್. ಆರ್. ದಾಮೋದರ್ ಶರ್ಮ ಅವರು ದುರ್ಗಾರಾಧನೆ, ಅ. 7ರಂದು ರಶ್ಮಿ ರ್ಪವದಿ ಅವರು ಭಕ್ತಿ ಬಾಳಿನ ಶಕ್ತಿ, ಅ. 8ರಂದು ವೇಲಾಪುರಿ ವಿಶ್ವನಾಥ ಶರ್ಮ ಅವರು ನರಹರನಾಗವೆಡೆಗೆ,
ಅ. 9ರಂದು ವಾರುಣಿ ನಾಗರಾಜ್ ಅವರು ಕರಾವಳಿಯ ದುರ್ಗಾ ದೇಗುಲಗಳು, ಅ. 10ರಂದು ಭಾಗ್ಯಶ್ರೀ ಐತಾಳ್ ಅವರು ಸಂಸಾರ-ಸಂಸ್ಕಾರ, ಅ. 11ರಂದು ರಖೀಬ್ ಕಣ್ಣಂಗಾರ್ ಅವರು ಜೀವನ ಪಾತ್ರೆಯಲ್ಲಿ ಪ್ರೀತಿಯ ದೇವರು ವಿಚಾರದಲ್ಲಿ ಉಪನ್ಯಾಸ ನೀಡಲಿದ್ದಾರೆ ಎಂದು ದ. ಕ. ಮೊಗವೀರ ಮಹಾಜನ ಸಂಘ, ಕ್ಷೇತ್ರಾಡಳಿತ ಸಮಿತಿ, ದಸರಾ ಸಮಿತಿ ಹಾಗೂ ಸಂಘ ಸಂಸ್ಥೆಗಳ ಪ್ರಕಟನೆ ತಿಳಿಸಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…