ಉಡುಪಿ: ಕಲ್ಸಂಕದ ಬಳಿ ಇರುವ ಪಾಳುಬಿದ್ದಿರುವ ಕನಕ ಮಹಲ್ ಎಂಬ ಬಹುಮಹಡಿ ಕಟ್ಟಡದ ನೆಲ ಅಂತಸ್ತಿನಲ್ಲಿ ಗಂಡಸಿನ ಶವವು ಕೊಳೆತ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.
ಶವವು ಗುರುತು ಸಿಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ಕೆಲವು ದಿನಗಳು ಕಳೆದಿರಬಹು ದೆಂದು ಶಂಕಿಸಲಾಗಿದೆ.ಸಾವಿನ ಕಾರಣ ಪೋಲಿಸ್ ತನಿಖೆಯಿಂದ ತಿಳಿಯಬೇಕಾಗಿದೆ.ಮೃತನ ಸಂಬಂಧಿಕರು ಉಡುಪಿ ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಘಟನಾ ಸ್ಥಳದಲ್ಲಿದ್ದು ಉಪನಿರೀಕ್ಷಕರಾದ ಭರತೇಶ್ ಕಂಕನಾಡಿ ಕಾನೂನು ಪ್ರಕ್ರಿಯೆ ನಡೆಸಿದರು.ನೇತ್ರಾವತಿ ಹೆಡ್ಕಾನ್ಸ್ ಟೇಬಲ್, ಸಿಬ್ಬಂದಿಗಳಾದ ಜಾಸ್ವ, ಮಲ್ಲಯ್ಯ ಸ್ಥಳದಲ್ಲಿದ್ದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಕಳೇಬರವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.ಸುನಿಲ್ ಬೈಲಕೆರೆ ಹಾಗೂ ಕಲ್ಸಂಕ ಆಟೋಚಾಲಕರು ಸಹಕರಿಸಿದರು.
ಕಟ್ಟಡದ ನಿರ್ಮಾಣ ಕಾಮಗಾರಿಯುಸ್ಥಗಿತಗೊಂಡು ಹಲವು ವರ್ಷಗಳು ಕಳೆದಿವೆ.ಕಟ್ಟಡದ ಸುತ್ತ ತಡೆ ಬೇಲಿಯಿಲ್ಲ. ಇಲ್ಲಿ ಈಗಾಗಲೇ ಹತ್ತಾರು ಕೊಳೆತ ಶವಗಳು ಸಿಕ್ಕಿರುವ ಘಟನೆಗಳು ನಡೆದಿವೆ. ಇದೊಂದು ಭಯಾನಕ ಕಟ್ಟಡವಾಗಿದೆ. ಸಂಬಂದಪಟ್ಟ ಅಧಿಕಾರಿಗಳು ಈ ಸ್ಥಳದಲ್ಲಿ ಸಾರ್ವಜನಿಕರು ಒಳ ನುಸುಳದಂತೆ ತಡೆಗೊಡೆ ನಿರ್ಮಿಸುವಂತೆ ಸ್ಥಳದ ಮಾಲಿಕರಿಂದ ಮಾಡಿಸುವಂತೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಗ್ರಹಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…