Featured

ಉಡುಪಿ: ಕಲ್ಸಂಕದ ಬಳಿ  ಹಾಳುಬಿದ್ದ ಕಟ್ಟಡದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ – Vishwanews24

ಉಡುಪಿ: ಉಡುಪಿ: ಕಲ್ಸಂಕದ ಬಳಿ  ಹಾಳುಬಿದ್ದ ಕಟ್ಟಡದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಉಡುಪಿ: ಕಲ್ಸಂಕದ ಬಳಿ ಇರುವ ಪಾಳುಬಿದ್ದಿರುವ ಕನಕ‌ ಮಹಲ್ ಎಂಬ ಬಹುಮಹಡಿ ಕಟ್ಟಡದ ನೆಲ ಅಂತಸ್ತಿನಲ್ಲಿ ಗಂಡಸಿನ ಶವವು ಕೊಳೆತ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.

ಶವವು ಗುರುತು ಸಿಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ಕೆಲವು ದಿನಗಳು ಕಳೆದಿರಬಹು ದೆಂದು ಶಂಕಿಸಲಾಗಿದೆ.ಸಾವಿನ ಕಾರಣ ಪೋಲಿಸ್ ತನಿಖೆಯಿಂದ ತಿಳಿಯಬೇಕಾಗಿದೆ.ಮೃತನ ಸಂಬಂಧಿಕರು ಉಡುಪಿ ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಘಟನಾ ಸ್ಥಳದಲ್ಲಿದ್ದು ಉಪನಿರೀಕ್ಷಕರಾದ ಭರತೇಶ್ ಕಂಕನಾಡಿ ಕಾನೂನು ಪ್ರಕ್ರಿಯೆ ನಡೆಸಿದರು.ನೇತ್ರಾವತಿ ಹೆಡ್‌ಕಾನ್ಸ್ ಟೇಬಲ್, ಸಿಬ್ಬಂದಿಗಳಾದ ಜಾಸ್ವ, ಮಲ್ಲಯ್ಯ ಸ್ಥಳದಲ್ಲಿದ್ದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಕಳೇಬರವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.ಸುನಿಲ್ ಬೈಲಕೆರೆ ಹಾಗೂ ಕಲ್ಸಂಕ ಆಟೋಚಾಲಕರು ಸಹಕರಿಸಿದರು.

ಕಟ್ಟಡದ ನಿರ್ಮಾಣ ಕಾಮಗಾರಿಯುಸ್ಥಗಿತಗೊಂಡು ಹಲವು ವರ್ಷಗಳು ಕಳೆದಿವೆ.ಕಟ್ಟಡದ ಸುತ್ತ ತಡೆ ಬೇಲಿಯಿಲ್ಲ. ಇಲ್ಲಿ ಈಗಾಗಲೇ ಹತ್ತಾರು ಕೊಳೆತ ಶವಗಳು ಸಿಕ್ಕಿರುವ ಘಟನೆಗಳು ನಡೆದಿವೆ. ಇದೊಂದು ಭಯಾನಕ ಕಟ್ಟಡವಾಗಿದೆ. ಸಂಬಂದಪಟ್ಟ ಅಧಿಕಾರಿಗಳು ಈ ಸ್ಥಳದಲ್ಲಿ ಸಾರ್ವಜನಿಕರು ಒಳ ನುಸುಳದಂತೆ ತಡೆಗೊಡೆ ನಿರ್ಮಿಸುವಂತೆ ಸ್ಥಳದ ಮಾಲಿಕರಿಂದ ಮಾಡಿಸುವಂತೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

5 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

5 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

6 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

6 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

6 hours ago