ಉಡುಪಿ: ತಮಿಳುನಾಡಿನ ಸಚಿವರಾದ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಟೀಕಿಸಿ ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷ ಅಂತರವನ್ನು ಕಾಯ್ದುಕೊಂಡಿದ್ದು ನಮ್ಮದ್ದು ಸರ್ವಧರ್ಮ ಸಮಭಾವದ ಸಿದ್ದಾಂತ ಎಂದು ಈಗಾಗಲೇ ಪಕ್ಷದ ವರಿಷ್ಠರು ಸ್ಪಷ್ಟಪಡಿಸಿದ್ದಾರೆ. ಸಚಿವ ಉದಯ ಸ್ಟಾಲಿನ್ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದೊಂದಿಗೆ ತಳುಕು ಹಾಕುತ್ತಿರುವ ಬಿಜೆಪಿಗರಿಗೆ ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ಎಂದು ಬಿಂಬಿಸುವ ಹುನ್ನಾರವನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಈ ಮೂಲಕ ಪ್ರಬಲವಾಗಿ ಖಂಡಿಸುತ್ತದೆ.
ಜಾತಿ ಧರ್ಮದ ಮಧ್ಯೆ ವಿಷಬೀಜ ಬಿತ್ತುವ ಬಿಜೆಪಿ ಪಕ್ಷದಿಂದ ನಾವು ಪಾಠ ಕಲಿಯಬೇಕಿಲ್ಲ. ಕಾಂಗ್ರೆಸ್ ಪಕ್ಷವು ಜಾತಿ ಧರ್ಮಗಳ ಮಧ್ಯೆ ಬೇಧ ಭಾವ ಮರೆತು ಸರ್ವಜನಾಂಗದ ಅಭಿವೃದ್ದಿಯತ್ತ ಯಾವಾಗಲೂ ಸಾಗಿದೆ. ಕಾಂಗ್ರೆಸ್ ಪಕ್ಷವು ಈವರೆಗೂ ನೀಡಿದ ಯೋಜನೆಗಳು ಸರ್ವ ಧರ್ಮಗಳಿಗೆ ಸಹಕಾರಿಯಾಗಿದೆ ಹಾಗೆಯೇ ನಮ್ಮ ಪಕ್ಷವೂ ಸರ್ವಧರ್ಮದವರ ಏಳಿಗೆಗಾಗಿ ರಚನಾತ್ಮಕ ಕಾರ್ಯಕ್ರಮಗಳನ್ನು ಕೈಗೊಂಡು ಈ ಭಾರತ ದೇಶವನ್ನು ಸಧೃಢವಾಗಿ ಕಟ್ಟಿದ ಬಗ್ಗೆ ಕಾಂಗ್ರೆಸ್ ಪಕ್ಷವನ್ನು ಟೀಕಿಸುವವರಿಗೆ ನೆನಪಿಸಲು ಇಚ್ಚಿಸುತ್ತಿದ್ದೇವೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…