Featured

ಉಡುಪಿ: ಉದಯ ಗಾಣಿಗ ಕೊಲೆ ಪ್ರಕರಣ – ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರನ್ನು ಬಂಧಿಸಿ ತಕ್ಕ ಶಿಕ್ಷೆ ಸಿಗುವಂತೆ ಮಾಡಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಸೊರಕೆ ಮನವಿ  -Vishwanews24

ಉಡುಪಿ: ಉದಯ ಗಾಣಿಗ ಕೊಲೆ ಪ್ರಕರಣ – ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರನ್ನು ಬಂಧಿಸಿ ತಕ್ಕ ಶಿಕ್ಷೆ ಸಿಗುವಂತೆ ಮಾಡಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಸೊರಕೆ ಮನವಿ  -Vishwanews24

ಉಡುಪಿ,: ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್, ಗೋಪಾಲ್ ಪೂಜಾರಿ ಇವರ ನೇತೃತ್ವದಲ್ಲಿ ಗಾಣಿಗ ಸಮಾಜದ ಮುಖಂಡರೊಂದಿಗೆ ಸೋಮವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವನ್ನು ಭೇಟಿ ನೀಡಿ ಸುಧೀರ್ಘ ಚರ್ಚೆ ನಡೆಸಿ ಉದಯ ಗಾಣಿಗ ಅವರ ಕೊಲೆ ಪ್ರಕರಣ ತಪ್ಪಿತಸ್ಥರು ಯಾರೇ ಆಗಿದ್ದರೂ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರನ್ನು ಬಂಧಿಸಿ ತಕ್ಕ ಶಿಕ್ಷೆ ಸಿಗುವಂತೆ ಮಾಡಿ ಪತ್ನಿ ಮಕ್ಕಳು ಮತ್ತು ಕುಟುಂಬಸ್ಥರಿಗೆ ನ್ಯಾಯವನ್ನು ಒದಗಿಸಿ ಕೊಡುವದರೊಂದಿಗೆ ಮೃತರ ಕುಟುಂಬಕ್ಕೆ ಸರಕಾರದಿಂದ ಪರಿಹಾರವನ್ನು ಸಿಗುವ ಹಾಗೆ ತಮ್ಮ ವರದಿಯನ್ನು ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಜೂನ್ 11 ಶುಕ್ರವಾರದಂದು ಸಚಿವ ವಿನಯ ಕುಮಾರ್ ಸೊರಕೆಯವರ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಇವರ ನೇತೃತ್ವದಲ್ಲಿ ಯಡಮೋಗೆಯಲ್ಲಿ ಕೊಲೆಯಾದ ಉದಯ್ ಗಾಣಿಗರ ಅವರ ಮನೆಗೆ ಭೇಟಿ ನೀಡಿ ಅವರ ಪತ್ನಿ ಮಕ್ಕಳು ಮತ್ತು ಹೆತ್ತವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮೃತ ಉದಯ ಗಾಣಿಗ ರವರ ಪತ್ನಿ ಹೆತ್ತವರು ಮತ್ತು ಸ್ಥಳೀಯರು ಕಾಂಗ್ರೆಸ್ ನಿಯೋಗದ ಮುಂದೆ ನಮಗೆ ನ್ಯಾಯ ದೊರಕಿಸಿಕೊಡಿ ಈಗಾಗಲೇ ಕೆಲವರನ್ನು ಮಾತ್ರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಕೆಲವು ಪ್ರಭಾವಿ ನಾಯಕರು ಭಾಗಿಯಾಗಿದ್ದಾರೆ. ಅವರನ್ನು ಬಂಧಿಸಿ ಅವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆ ನೀಡುವುದಕ್ಕೆ ನಮಗೆ ಸಹಾಯ ಮಾಡಬೇಕೆಂದು ಮೃತರ ಕುಟುಂಬದವರು ಕಾಂಗ್ರೆಸ್ ನಿಯೋಗಕ್ಕೆ ಮನವಿ ಮಾಡಿದರು.

ಇನ್ನು ಕುಟುಂಬದ ಮನವಿಯಂತೆ ಇಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್ ಜತನ್ನ , ರಮೇಶ್ ಗಾಣಿಗ, ರವಿ ಗಾಣಿಗ ಆಜ್ರಿ ಮತ್ತಿತರರು ಉಪಸ್ಥತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago