ಉಡುಪಿ,: ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್, ಗೋಪಾಲ್ ಪೂಜಾರಿ ಇವರ ನೇತೃತ್ವದಲ್ಲಿ ಗಾಣಿಗ ಸಮಾಜದ ಮುಖಂಡರೊಂದಿಗೆ ಸೋಮವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವನ್ನು ಭೇಟಿ ನೀಡಿ ಸುಧೀರ್ಘ ಚರ್ಚೆ ನಡೆಸಿ ಉದಯ ಗಾಣಿಗ ಅವರ ಕೊಲೆ ಪ್ರಕರಣ ತಪ್ಪಿತಸ್ಥರು ಯಾರೇ ಆಗಿದ್ದರೂ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರನ್ನು ಬಂಧಿಸಿ ತಕ್ಕ ಶಿಕ್ಷೆ ಸಿಗುವಂತೆ ಮಾಡಿ ಪತ್ನಿ ಮಕ್ಕಳು ಮತ್ತು ಕುಟುಂಬಸ್ಥರಿಗೆ ನ್ಯಾಯವನ್ನು ಒದಗಿಸಿ ಕೊಡುವದರೊಂದಿಗೆ ಮೃತರ ಕುಟುಂಬಕ್ಕೆ ಸರಕಾರದಿಂದ ಪರಿಹಾರವನ್ನು ಸಿಗುವ ಹಾಗೆ ತಮ್ಮ ವರದಿಯನ್ನು ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.
ಜೂನ್ 11 ಶುಕ್ರವಾರದಂದು ಸಚಿವ ವಿನಯ ಕುಮಾರ್ ಸೊರಕೆಯವರ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಇವರ ನೇತೃತ್ವದಲ್ಲಿ ಯಡಮೋಗೆಯಲ್ಲಿ ಕೊಲೆಯಾದ ಉದಯ್ ಗಾಣಿಗರ ಅವರ ಮನೆಗೆ ಭೇಟಿ ನೀಡಿ ಅವರ ಪತ್ನಿ ಮಕ್ಕಳು ಮತ್ತು ಹೆತ್ತವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮೃತ ಉದಯ ಗಾಣಿಗ ರವರ ಪತ್ನಿ ಹೆತ್ತವರು ಮತ್ತು ಸ್ಥಳೀಯರು ಕಾಂಗ್ರೆಸ್ ನಿಯೋಗದ ಮುಂದೆ ನಮಗೆ ನ್ಯಾಯ ದೊರಕಿಸಿಕೊಡಿ ಈಗಾಗಲೇ ಕೆಲವರನ್ನು ಮಾತ್ರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಕೆಲವು ಪ್ರಭಾವಿ ನಾಯಕರು ಭಾಗಿಯಾಗಿದ್ದಾರೆ. ಅವರನ್ನು ಬಂಧಿಸಿ ಅವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆ ನೀಡುವುದಕ್ಕೆ ನಮಗೆ ಸಹಾಯ ಮಾಡಬೇಕೆಂದು ಮೃತರ ಕುಟುಂಬದವರು ಕಾಂಗ್ರೆಸ್ ನಿಯೋಗಕ್ಕೆ ಮನವಿ ಮಾಡಿದರು.
ಇನ್ನು ಕುಟುಂಬದ ಮನವಿಯಂತೆ ಇಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್ ಜತನ್ನ , ರಮೇಶ್ ಗಾಣಿಗ, ರವಿ ಗಾಣಿಗ ಆಜ್ರಿ ಮತ್ತಿತರರು ಉಪಸ್ಥತರಿದ್ದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…