Featured

ಉಡುಪಿ: ಉದಯ ಗಾಣಿಗ ಕೊಲೆ ಪ್ರಕರಣ – ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರನ್ನು ಬಂಧಿಸಿ ತಕ್ಕ ಶಿಕ್ಷೆ ಸಿಗುವಂತೆ ಮಾಡಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಸೊರಕೆ ಮನವಿ  -Vishwanews24

ಉಡುಪಿ: ಉದಯ ಗಾಣಿಗ ಕೊಲೆ ಪ್ರಕರಣ – ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರನ್ನು ಬಂಧಿಸಿ ತಕ್ಕ ಶಿಕ್ಷೆ ಸಿಗುವಂತೆ ಮಾಡಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಸೊರಕೆ ಮನವಿ  -Vishwanews24

ಉಡುಪಿ,: ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್, ಗೋಪಾಲ್ ಪೂಜಾರಿ ಇವರ ನೇತೃತ್ವದಲ್ಲಿ ಗಾಣಿಗ ಸಮಾಜದ ಮುಖಂಡರೊಂದಿಗೆ ಸೋಮವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವನ್ನು ಭೇಟಿ ನೀಡಿ ಸುಧೀರ್ಘ ಚರ್ಚೆ ನಡೆಸಿ ಉದಯ ಗಾಣಿಗ ಅವರ ಕೊಲೆ ಪ್ರಕರಣ ತಪ್ಪಿತಸ್ಥರು ಯಾರೇ ಆಗಿದ್ದರೂ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರನ್ನು ಬಂಧಿಸಿ ತಕ್ಕ ಶಿಕ್ಷೆ ಸಿಗುವಂತೆ ಮಾಡಿ ಪತ್ನಿ ಮಕ್ಕಳು ಮತ್ತು ಕುಟುಂಬಸ್ಥರಿಗೆ ನ್ಯಾಯವನ್ನು ಒದಗಿಸಿ ಕೊಡುವದರೊಂದಿಗೆ ಮೃತರ ಕುಟುಂಬಕ್ಕೆ ಸರಕಾರದಿಂದ ಪರಿಹಾರವನ್ನು ಸಿಗುವ ಹಾಗೆ ತಮ್ಮ ವರದಿಯನ್ನು ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಜೂನ್ 11 ಶುಕ್ರವಾರದಂದು ಸಚಿವ ವಿನಯ ಕುಮಾರ್ ಸೊರಕೆಯವರ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಇವರ ನೇತೃತ್ವದಲ್ಲಿ ಯಡಮೋಗೆಯಲ್ಲಿ ಕೊಲೆಯಾದ ಉದಯ್ ಗಾಣಿಗರ ಅವರ ಮನೆಗೆ ಭೇಟಿ ನೀಡಿ ಅವರ ಪತ್ನಿ ಮಕ್ಕಳು ಮತ್ತು ಹೆತ್ತವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮೃತ ಉದಯ ಗಾಣಿಗ ರವರ ಪತ್ನಿ ಹೆತ್ತವರು ಮತ್ತು ಸ್ಥಳೀಯರು ಕಾಂಗ್ರೆಸ್ ನಿಯೋಗದ ಮುಂದೆ ನಮಗೆ ನ್ಯಾಯ ದೊರಕಿಸಿಕೊಡಿ ಈಗಾಗಲೇ ಕೆಲವರನ್ನು ಮಾತ್ರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಕೆಲವು ಪ್ರಭಾವಿ ನಾಯಕರು ಭಾಗಿಯಾಗಿದ್ದಾರೆ. ಅವರನ್ನು ಬಂಧಿಸಿ ಅವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆ ನೀಡುವುದಕ್ಕೆ ನಮಗೆ ಸಹಾಯ ಮಾಡಬೇಕೆಂದು ಮೃತರ ಕುಟುಂಬದವರು ಕಾಂಗ್ರೆಸ್ ನಿಯೋಗಕ್ಕೆ ಮನವಿ ಮಾಡಿದರು.

ಇನ್ನು ಕುಟುಂಬದ ಮನವಿಯಂತೆ ಇಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್ ಜತನ್ನ , ರಮೇಶ್ ಗಾಣಿಗ, ರವಿ ಗಾಣಿಗ ಆಜ್ರಿ ಮತ್ತಿತರರು ಉಪಸ್ಥತರಿದ್ದರು.

Vishwa News 24

Recent Posts

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

1 minute ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

12 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

20 hours ago