Featured

ಉಡುಪಿ : ಉದ್ಯಮಿಗೆ ವ್ಯವಹಾರದಲ್ಲಿ ಕೋಟಿ ರೂ. ವಂಚನೆ ಆರೋಪ; ದಂಪತಿ ವಿರುದ್ಧ ಪ್ರಕರಣ ದಾಖಲು – vishwanews24

ಉದ್ಯಮಿಗೆ ವ್ಯವಹಾರದಲ್ಲಿ ಕೋಟಿ ರೂ. ವಂಚನೆ ಆರೋಪ; ಉಡುಪಿ ಮೂಲದ ದಂಪತಿ ವಿರುದ್ಧ ಪ್ರಕರಣ ದಾಖಲು

ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸುಹಾಸಿನಿ ಶೆಟ್ಟಿ ಹಾಗೂ ಅವರ ಪತಿ ಪುನೀತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.

ಎರಡು ವರ್ಷಗಳಲ್ಲಿ ಹಂತ ಹಂತವಾಗಿ ವಂಚನೆ ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿರುವ ಸುಹಾಸಿನಿ, 2024ರ ಜನವರಿಯಿಂದ ಜೂನ್‌ವರೆಗೆ ಹಂತ ಹಂತವಾಗಿ 4.78 ಕೋಟಿ ರೂ. ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಹಾಗೂ ಸ್ಕ್ರಾಪ್ ವ್ಯವಹಾರದಲ್ಲಿ ಲಾಭಕರ ಹೂಡಿಕೆ ಮಾಡಿಕೊಡುವುದಾಗಿ ಭರವಸೆ ನೀಡಿ ಹಣ ಪಡೆದುಕೊಂಡಿದ್ದರೂ, ನಂತರ ಯಾವುದೇ ಆಸ್ತಿಯನ್ನೂ ಖರೀದಿಸಿ ಕೊಡದೆ ವಂಚನೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ :

ಈ ಬಗ್ಗೆ 2024ರಲ್ಲಿ ಉಡುಪಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ಪ್ರಕರಣಕ್ಕೆ ಸ್ಟೇ ಆದೇಶ ಪಡೆದಿದ್ದರು ಎನ್ನಲಾಗಿದೆ. ನಂತರ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎನ್ನುವವರ ಮೂಲಕ ಸಂಧಾನ ಮಾತುಕತೆ ನಡೆದಿದ್ದರೂ ಅದು ವಿಫಲವಾಗಿದೆ. ಇದೀಗ ಸುಹಾಸಿನಿ ಮತ್ತು ಪತಿ ಮಣಿಪಾಲದಿಂದ ಮಂಗಳೂರಿಗೆ ಸ್ಥಳಾಂತರಗೊಂಡ ಹಿನ್ನೆಲೆ, ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಮರು ತನಿಖೆಗೆ ಮನವಿ ಮಾಡಿದ್ದಾರೆ. ಪ್ರಕರಣವನ್ನು ಮರು ಪರಿಶೀಲಿಸುವುದಾಗಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಭರವಸೆ ನೀಡಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago