ಬೆಂಗಳೂರು: ರಾಜ್ಯದ ಗಮನ ಸೆಳೆದಿದ್ದ ಉಡುಪಿಯ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ರದ್ದುಪಡಿಸಬೇಕು ಮತ್ತು ಅಧೀನ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಅಮಾನತಿನಲ್ಲಿ ಇಟ್ಟು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ರಾಜೇಶ್ವರಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಇ ಎಸ್ ಇಂದಿರೇಶ್ ಅವರಿದ್ದ ವಿಭಾಗೀಯ ಪೀಠ ನಡೆಸಿತು.
ಮಧ್ಯಂತರ ಮನವಿ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಮತ್ತು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ವಿಭಾಗೀಯ ನ್ಯಾಯಪೀಠ ರಾಜೇಶ್ವರಿ ಶೆಟ್ಟಿ ಅವರಿಗೆ ವಿಧಿಸಿರುವ ಜಾಮೀನು ನೀಡಿ ಗುರುವಾರ ಆದೇಶಿಸಿದೆ.
2016ರ ಜುಲೈ 28ರಂದು ಉದ್ಯಮಿ ಇಂದ್ರಾಳಿಯ ಭಾಸ್ಕರ್ ಅವರನ್ನು ಭೀಕರವಾಗಿ ಕೊಲೆ ಮಾಡಿ ಶವವನ್ನು ಹೋಮಕುಂಡದಲ್ಲಿ ದಹಿಸಲಾಗಿತ್ತು. ಅವಶೇಷಗಳನ್ನು ಹತ್ತಿರದ ನದಿಗೆ ಎಸೆಯಲಾಗಿತ್ತು. ಅದೇ ತಿಂಗಳ 31ರಂದು ತಮ್ಮ ಮಗ ನಾಪತ್ತೆಯಾಗಿರುವ ಬಗ್ಗೆ ಭಾಸ್ಕರ್ ಅವರ ತಾಯಿ ಮಣಿಪಾಲ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆಗಸ್ಟ್ ನಲ್ಲಿ ಆರೋಪಿಗಳನ್ನು ಬಂಧಿಸಿದ್ದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…