ಉಡುಪಿ : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಂತಿಮ ಹಾಗೂ ಮಹತ್ವದ ತೀರ್ಪು – Vishwanews24
ಉಡುಪಿ : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಂತಿಮ ಹಾಗೂ ಮಹತ್ವದ ತೀರ್ಪು – Vishwanews24
ಉಡುಪಿ, : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜೂನ್ 8) ಅಂತಿಮ ಹಾಗೂ ಮಹತ್ವದ ತೀರ್ಪು ಹೊರಬೀಳಲಿದೆ. ಮೇ 31ರಂದು ಪ್ರಕಟವಾಗಬೇಕಿದ್ದ ಅಂತಿಮ ತೀರ್ಪನ್ನು ಕೋವಿಡ್ ಕಾರಣದಿಂದಾಗಿ ಇಂದಿಗೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ ಮುಂದೂಡಿದ್ದರು.
ತೀರ್ಪು ನೀಡುವ ವೇಳೆ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ್ಯ ನಾಶ ಆರೋಪಿ ರಾಘವೇಂದ್ರ ಹಾಜರಾಗಲು ಆದೇಶ ನೀಡಿದೆ.ಜೊತೆಗೆ ಜೈಲಿನಲ್ಲಿರುವ ಆರೋಪಿಗಳಾದ ನವನೀತ್ ಶೆಟ್ಟಿ ಮತ್ತು ನಿರಂಜನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಸೂಚಿಸಿದೆ.
ಪ್ರಕರಣದ ಆರೋಪಿ ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜೀವಬೆದರಿಕೆ ಇರುವ ಹಿನ್ನಲೆಯಲ್ಲಿ ಅಗತ್ಯವಿದ್ದರೆ ಸೂಕ್ತ ಭದ್ರತೆಯನ್ನು ನೀಡುವಂತೆ ಉಡುಪಿ ಜಿಲ್ಲಾ ನ್ಯಾಯಾಧೀಶ ಜೆ.ಎನ್ ಸುಬ್ರಹ್ಮಣ್ಯ ಅವರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಸೂಚಿಸಿದ್ದಾರೆ.
