ಉಡುಪಿ: ಜಿಲ್ಲೆಯ ಉದ್ಯಾವರದ ಕಲ್ಸಂಕದಲ್ಲಿ ನಾರಾಯಣ ಪೂಜಾರಿ ಎಂಬವರ ಜಾಗದಲ್ಲಿ ರಸ್ತೆ ಅಗಲೀಕರಣ ಸಂದರ್ಭ ಸರಕಾರಿ ಪದವಿ ಪೂರ್ವ ಕಾಲೇಜು-ಹೆಜಮಾಡಿ ದೈಹಿಕ ಶಿಕ್ಷಕ ಅಲ್ವಿನ್ ಅಂದ್ರಾದೆ ಶಾಸನವೊಂದನ್ನು ಪತ್ತೆ ಮಾಡಿದ್ದಾರೆ.
ಈ ಶಾಸನವನ್ನು ಪರಿಶೀಲಿಸಿದ ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಇದು 7ನೇ ಶತಮಾನದ ಆಳುಪರ ಶಾಸನವೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ -Vishwanews24
ಅಗ್ನಿ ಶಿಲೆ (Volcanic Rock) ಯಿಂದ ಕೊರೆಯಲ್ಪಟ್ಟ ಈ ಶಾಸನವು 3 ಅಡಿ ಎತ್ತರ ಹೊಂದಿದ್ದು, ಶಿಲೆಯ ಎರಡು ಭಾಗದಲ್ಲಿ ಶಾಸನವನ್ನು ಬರೆಯಲಾಗಿದೆ. ಶಾಸನದ ಒಂದು ಮಗ್ಗುಲಲ್ಲಿ 5 ಸಾಲುಗಳಿದ್ದು, ಇನ್ನೊಂದು ಮಗ್ಗುಲಲ್ಲಿ 6 ಸಾಲುಗಳಿವೆ. 7ನೇ ಶತಮಾನದ ಕನ್ನಡ ಲಿಪಿ ಮತ್ತು ಕನ್ನಡ ಭಾಷೆಯಲ್ಲಿರುವ ಶಾಸನದ ಹೆಚ್ಚಿನ ಅಕ್ಷರಗಳು ತೃಟಿತಗೊಂಡಿದ್ದು, ಕೊನೆಯಲ್ಲಿ ನಿರಿದ ಕಲ್ಲು ಎಂಬ ಉಲ್ಲೇಖವಿದೆ. ಹಾಗಾಗಿ ಈ ಶಾಸನವನ್ನು ಯಾವುದೋ ಘಟನೆಯ ನೆನಪಿಗಾಗಿ ಹಾಕಿರಬಹುದೆಂದು ಮತ್ತು ಈ ಶಾಸನದ ಹೆಚ್ಚಿನ ಅಧ್ಯಯನವನ್ನು ಮಾಡುವುದಾಗಿ ಸಂಶೋಧನಾರ್ಥಿ ಶ್ರುತೇಶ್ ತಿಳಿಸಿದ್ದಾರೆ.
ಈ ಕ್ಷೇತ್ರಕಾರ್ಯ ಶೋಧನೆಯ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು ಹಾಗೂ ಮಂಜುನಾಥ ಆಚಾರ್ಯ ಪಳ್ಳಿ ಮತ್ತು ಸ್ಥಳೀಯರು ಸಹಕಾರ ನೀಡಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…