Featured

ಉಡುಪಿ: ಉದ್ಯಾವರದ ಕಲ್ಸಂಕದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆ -Vishwanews24

ಉಡುಪಿ: ಉದ್ಯಾವರದ ಕಲ್ಸಂಕದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆ -Vishwanews24

ಉಡುಪಿ‌: ಜಿಲ್ಲೆಯ ಉದ್ಯಾವರದ ಕಲ್ಸಂಕದಲ್ಲಿ ನಾರಾಯಣ ಪೂಜಾರಿ ಎಂಬವರ ಜಾಗದಲ್ಲಿ ರಸ್ತೆ ಅಗಲೀಕರಣ ಸಂದರ್ಭ ಸರಕಾರಿ ಪದವಿ ಪೂರ್ವ ಕಾಲೇಜು-ಹೆಜಮಾಡಿ ದೈಹಿಕ ಶಿಕ್ಷಕ ಅಲ್ವಿನ್ ಅಂದ್ರಾದೆ ಶಾಸನವೊಂದನ್ನು ಪತ್ತೆ ಮಾಡಿದ್ದಾರೆ.

ಈ ಶಾಸನವನ್ನು ಪರಿಶೀಲಿಸಿದ ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಇದು 7ನೇ ಶತಮಾನದ ಆಳುಪರ ಶಾಸನವೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ‌‌.

ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ -Vishwanews24

ಅಗ್ನಿ ಶಿಲೆ (Volcanic Rock) ಯಿಂದ ಕೊರೆಯಲ್ಪಟ್ಟ ‌ಈ ಶಾಸನವು 3 ಅಡಿ ಎತ್ತರ ‌ಹೊಂದಿದ್ದು,‌ ಶಿಲೆಯ ಎರಡು ಭಾಗದಲ್ಲಿ‌ ಶಾಸನವನ್ನು ಬರೆಯಲಾಗಿದೆ‌. ಶಾಸನದ ಒಂದು ಮಗ್ಗುಲಲ್ಲಿ 5 ಸಾಲುಗಳಿದ್ದು, ಇನ್ನೊಂದು‌ ಮಗ್ಗುಲಲ್ಲಿ 6 ಸಾಲುಗಳಿವೆ‌. 7ನೇ ಶತಮಾನದ ಕನ್ನಡ ಲಿಪಿ ಮತ್ತು ಕನ್ನಡ ಭಾಷೆಯಲ್ಲಿರುವ ಶಾಸನದ ಹೆಚ್ಚಿನ ಅಕ್ಷರಗಳು‌ ತೃಟಿತಗೊಂಡಿದ್ದು, ಕೊನೆಯಲ್ಲಿ ನಿರಿದ ಕಲ್ಲು ಎಂಬ ಉಲ್ಲೇಖವಿದೆ. ಹಾಗಾಗಿ ಈ‌ ಶಾಸನವನ್ನು ಯಾವುದೋ ಘಟನೆಯ‌ ನೆನಪಿಗಾಗಿ‌ ಹಾಕಿರಬಹುದೆಂದು ಮತ್ತು ಈ ಶಾಸನದ ಹೆಚ್ಚಿನ ಅಧ್ಯಯನವನ್ನು ಮಾಡುವುದಾಗಿ ಸಂಶೋಧನಾರ್ಥಿ ಶ್ರುತೇಶ್ ತಿಳಿಸಿದ್ದಾರೆ.

ಈ ಕ್ಷೇತ್ರಕಾರ್ಯ ಶೋಧನೆಯ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಗಣೇಶ್‌ ರಾಜ್ ಸರಳಬೆಟ್ಟು‌ ಹಾಗೂ ಮಂಜುನಾಥ ಆಚಾರ್ಯ ಪಳ್ಳಿ ಮತ್ತು ಸ್ಥಳೀಯರು ಸಹಕಾರ ನೀಡಿದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

9 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

10 hours ago