Featured

ಉಡುಪಿ: ಉದ್ಯಾವರದ ಕಲ್ಸಂಕದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆ -Vishwanews24

ಉಡುಪಿ: ಉದ್ಯಾವರದ ಕಲ್ಸಂಕದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆ -Vishwanews24

ಉಡುಪಿ‌: ಜಿಲ್ಲೆಯ ಉದ್ಯಾವರದ ಕಲ್ಸಂಕದಲ್ಲಿ ನಾರಾಯಣ ಪೂಜಾರಿ ಎಂಬವರ ಜಾಗದಲ್ಲಿ ರಸ್ತೆ ಅಗಲೀಕರಣ ಸಂದರ್ಭ ಸರಕಾರಿ ಪದವಿ ಪೂರ್ವ ಕಾಲೇಜು-ಹೆಜಮಾಡಿ ದೈಹಿಕ ಶಿಕ್ಷಕ ಅಲ್ವಿನ್ ಅಂದ್ರಾದೆ ಶಾಸನವೊಂದನ್ನು ಪತ್ತೆ ಮಾಡಿದ್ದಾರೆ.

ಈ ಶಾಸನವನ್ನು ಪರಿಶೀಲಿಸಿದ ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಇದು 7ನೇ ಶತಮಾನದ ಆಳುಪರ ಶಾಸನವೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ‌‌.

ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ -Vishwanews24

ಅಗ್ನಿ ಶಿಲೆ (Volcanic Rock) ಯಿಂದ ಕೊರೆಯಲ್ಪಟ್ಟ ‌ಈ ಶಾಸನವು 3 ಅಡಿ ಎತ್ತರ ‌ಹೊಂದಿದ್ದು,‌ ಶಿಲೆಯ ಎರಡು ಭಾಗದಲ್ಲಿ‌ ಶಾಸನವನ್ನು ಬರೆಯಲಾಗಿದೆ‌. ಶಾಸನದ ಒಂದು ಮಗ್ಗುಲಲ್ಲಿ 5 ಸಾಲುಗಳಿದ್ದು, ಇನ್ನೊಂದು‌ ಮಗ್ಗುಲಲ್ಲಿ 6 ಸಾಲುಗಳಿವೆ‌. 7ನೇ ಶತಮಾನದ ಕನ್ನಡ ಲಿಪಿ ಮತ್ತು ಕನ್ನಡ ಭಾಷೆಯಲ್ಲಿರುವ ಶಾಸನದ ಹೆಚ್ಚಿನ ಅಕ್ಷರಗಳು‌ ತೃಟಿತಗೊಂಡಿದ್ದು, ಕೊನೆಯಲ್ಲಿ ನಿರಿದ ಕಲ್ಲು ಎಂಬ ಉಲ್ಲೇಖವಿದೆ. ಹಾಗಾಗಿ ಈ‌ ಶಾಸನವನ್ನು ಯಾವುದೋ ಘಟನೆಯ‌ ನೆನಪಿಗಾಗಿ‌ ಹಾಕಿರಬಹುದೆಂದು ಮತ್ತು ಈ ಶಾಸನದ ಹೆಚ್ಚಿನ ಅಧ್ಯಯನವನ್ನು ಮಾಡುವುದಾಗಿ ಸಂಶೋಧನಾರ್ಥಿ ಶ್ರುತೇಶ್ ತಿಳಿಸಿದ್ದಾರೆ.

ಈ ಕ್ಷೇತ್ರಕಾರ್ಯ ಶೋಧನೆಯ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಗಣೇಶ್‌ ರಾಜ್ ಸರಳಬೆಟ್ಟು‌ ಹಾಗೂ ಮಂಜುನಾಥ ಆಚಾರ್ಯ ಪಳ್ಳಿ ಮತ್ತು ಸ್ಥಳೀಯರು ಸಹಕಾರ ನೀಡಿದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

8 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

9 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

9 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

9 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

9 hours ago